ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್

Updated on: Jan 09, 2025 | 8:49 AM

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಧನರಾಜ್ ಅವರು ಉತ್ತಮವಾಗಿ ಆಟ ಆಡುತ್ತಿದ್ದಾರೆ. ಆದರೆ, ಅವರು ಆಡುವ ಆಟ ಮಾತ್ರ ಇಲ್ಲಿ ಕೆಲಸಕ್ಕೆ ಬರೋದಿಲ್ಲ. ಎದುರಾಳಿಗಳ ಪ್ಲ್ಯಾನಿಂಗ್ ಕೂಡ ಮುಖ್ಯ ಆಗುತ್ತದೆ. ಈಗ ಧನರಾಜ್ ಅವರು ನಂಬಿ ಮೋಸ ಹೋದರೇ ಎನ್ನುವ ಪ್ರಶ್ನೆ ಮೂಡಿದೆ.

ಧನರಾಜ್ ಅವರು ಬಿಗ್ ಬಾಸ್​​ನಲ್ಲಿ ಎಲ್ಲರನ್ನೂ ನಂಬಿಕೊಂಡಿದ್ದರು. ಆದರೆ ಆಟ ಸೋತು ಒಬ್ಬರನ್ನು ಹೊರಗೆ ಇಡಬೇಕು ಎಂದಾಗ ಎಲ್ಲರೂ ಧನರಾಜ್ ಹೆಸರನ್ನೇ ತೆಗೆದುಕೊಂಡರು. ಈ ಮೂಲಕ ಫಿನಾಲೆ ಟಿಕೆಟ್ ಪಡೆಯುವ ಅವಕಾಶ ಅವರ ಕೈ ತಪ್ಪಿದೆ. ಈ ವಾರ ಅವರು ನಾಮಿನೇಟ್ ಕೂಡ ಆಗಿದ್ದು, ಅದರಿಂದಲೂ ಬಚಾವ್ ಆಗಬೇಕಾದ ಅನಿವಾರ್ಯತೆ ಇದೆ. ಅವರಿಗೆ ನಂಬಿ ಮೋಸ ಹೋದ ಭಾವನೆ ಕಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Jan 09, 2025 08:20 AM
Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More