AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಂಸಾ, ಜಗದೀಶ್ ಬಗ್ಗೆ ನೇರವಾಗಿ ಮಾತಾಡಿದ ಧನರಾಜ್; ಕಿಚ್ಚ ಸುದೀಪ್​ಗೂ ಶಾಕ್

ಹಂಸಾ, ಜಗದೀಶ್ ಬಗ್ಗೆ ನೇರವಾಗಿ ಮಾತಾಡಿದ ಧನರಾಜ್; ಕಿಚ್ಚ ಸುದೀಪ್​ಗೂ ಶಾಕ್

ಮದನ್​ ಕುಮಾರ್​
|

Updated on: Oct 13, 2024 | 6:21 PM

Share

ಹಂಸಾ ಅವರು ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಕಾರ್ಯಕ್ರಮದಲ್ಲಿ ಮೊದಲ ಕ್ಯಾಪ್ಟನ್​ ಆಗಿದ್ದರು. ಅವರ ಬಗ್ಗೆ ಕಿಚ್ಚ ಸುದೀಪ್​ ಎದುರು ಧನರಾಜ್​ ಮಾತನಾಡಿದ್ದಾರೆ. ಅಲ್ಲದೇ ಜಗದೀಶ್​ ಬಗ್ಗೆಯೂ ಧನರಾಜ್ ಕೆಲವು ವಿಚಾರ ಪ್ರಸ್ತಾಪಿಸಿದ್ದಾರೆ. ಕಾಮಿಡಿ ಮೂಲಕವೇ ಎಲ್ಲರನ್ನೂ ಸೆಳೆದುಕೊಳ್ಳುವ ಧನರಾಜ್​ ಅವರ ಮಾತು ಕೇಳಿ ಸುದೀಪ್​ ಬಿದ್ದುಬಿದ್ದು ನಕ್ಕಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಹಂಸಾ ಅವರ ಕ್ಯಾಪ್ಟೆನ್ಸಿ ಹೇಗಿತ್ತು ಮತ್ತು ಅದರಿಂದ ಏನೆಲ್ಲ ಕಲಿಯಬೇಕು ಎಂಬುದನ್ನು ಧನರಾಜ್​ ಹೇಳಿದ್ದಾರೆ. ‘ಹಂಸಾ ಅವರು ಸ್ಟ್ರಾಂಗ್​ ಆಗಿ ಇರಬೇಕು. ಹೆದರಬಾರದು’ ಎಂದು ಧನರಾಜ್​ ಸಲಹೆ ನೀಡಿದ್ದಾರೆ. ‘ಒಂದು ವೇಳೆ ಜಗದೀಶ್​ ಕ್ಯಾಪ್ಟನ್​ ಆದರೆ ಮನೆ ಹೇಗಿರುತ್ತದೆ’ ಎಂದು ಸುದೀಪ್​ ಪ್ರಶ್ನಿಸಿದ್ದಾರೆ. ‘ರೂಲ್ಸ್​ ಬ್ರೇಕ್​ ಮಾಡುವವರೇ ಕ್ಯಾಪ್ಟನ್​ ಆದರೆ ಎಲ್ಲರೂ ಮಲಗಿಸ್ತಾರೆ’ ಎಂದಿದ್ದಾರೆ ಧನರಾಜ್​. ಈ ಮಾತಿನಿಂದ ನಿರೂಪಕ ಸುದೀಪ್​ ಹಾಗೂ ಬಿಗ್​ ಬಾಸ್​ ಮನೆಯ ಎಲ್ಲ ಸದಸ್ಯರಿಗೆ ನಗು ಬಂದಿದೆ. ಅ.13ರ ರಾತ್ರಿ 9 ಗಂಟೆಗೆ ‘ಕಲರ್ಸ್​ ಕನ್ನಡ’ ಮತ್ತು ‘ಜಿಯೋ ಸಿನಿಮಾ’ ಒಟಿಟಿಯಲ್ಲಿ ಈ ಸಂಚಿಕೆ ಪ್ರಸಾರ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More