AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್

ಮದನ್​ ಕುಮಾರ್​
|

Updated on: Jan 09, 2025 | 7:26 PM

Share

ಧನರಾಜ್ ಅವರು ಫಿನಾಲೆ ಟಿಕೆಟ್​ ಪಡೆಯಬೇಕು ಎಂದು ಕಷ್ಟಪಟ್ಟು ಆಟ ಆಡಿದ್ದರು. ಗೌತಮಿ ಜಾದವ್ ಮತ್ತು ಉಗ್ರಂ ಮಂಜು ಜೊತೆ ಅವರು ಕೈ ಜೋಡಿಸಿದ್ದರು. ಆದರೆ ಕೊನೇ ಹಂತದಲ್ಲಿ ಗೌತಮಿ ಮತ್ತು ಮಂಜು ಸೇರಿ ಧನರಾಜ್​ಗೆ ಫಿನಾಲೆ ಟಿಕೆಟ್​ ಸಿಗದಂತೆ ಮಾಡಿದ್ದಾರೆ. ಈ ಸ್ಥಿತಿ ಬಂದಿದ್ದಕ್ಕೆ ಇನ್ನುಳಿದ ಸದಸ್ಯರು ಲೇವಡಿ ಮಾಡಿದ್ದಾರೆ.

ಬಿಗ್ ಬಾಸ್​ ಮನೆಯಲ್ಲಿ ಈ ವಾರ ಉಗ್ರಂ ಮಂಜು, ಗೌತಮಿ ಜಾದವ್​ ಹಾಗೂ ಧನರಾಜ್ ಅವರು ಒಂದು ತಂಡವಾಗಿ ಆಟವಾಡಿದ್ದರು. ಆದರೆ ಮಂಜು ಮತ್ತು ಗೌತಮಿ ಅವರಿಂದಾಗಿ ಧನರಾಜ್​ಗೆ ಫಿನಾಲೆ ಟಿಕೆಟ್​ ಕೈತಪ್ಪಿ ಹೋಗಿದೆ. ಚೈತ್ರಾ ಕುಂದಾಪುರ, ರಜತ್ ಮುಂತಾದವರು ಈ ವಿಷಯದ ಬಗ್ಗೆ ಚರ್ಚೆ ಮಾಡಿದ್ದಾರೆ. ಜನವರಿ 9ರ ಸಂಚಿಕೆಯಲ್ಲಿ ಇದು ಪ್ರಸಾರ ಆಗಲಿದೆ. ಈ ಎಪಿಸೋಡ್​ನ ಪ್ರೋಮೋವನ್ನು ‘ಕಲರ್ಸ್​ ಕನ್ನಡ’ ವಾಹಿನಿ ಹಂಚಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More