ಕಾವ್ಯ ಎದುರಲ್ಲೇ ಗಿಲ್ಲಿ ಹಣೆಬರಹ ತೆರೆದಿಟ್ಟ ಧನುಷ್: ಅಶ್ವಿನಿ ಸೈಲೆಂಟ್ ಆಗಿದ್ದೇಕೆ?

Updated on: Nov 25, 2025 | 5:12 PM

ಬಿಗ್ ಬಾಸ್ ಆಟದಲ್ಲಿ ಗಿಲ್ಲಿ ಹಾಗೂ ಅಶ್ವಿನಿ ಗೌಡ ಮಧ್ಯೆ ಜಗಳ ಆಗಿತ್ತು. ಅದರಿಂದ ಗಿಲ್ಲಿಗೆ ಲಾಭ ಆಗಿದ್ದೇ ಹೆಚ್ಚು. ವುಮನ್ ಕಾರ್ಡ್ ಪ್ಲೇ ಮಾಡಲು ಹೋಗಿ ಅಶ್ವಿನಿ ಗೌಡ ವಿಫಲರಾದರು. ಅದರ ಪರಿಣಾಮವಾಗಿ ಅಶ್ವಿನಿ ಗೌಡ ಸೈಲೆಂಟ್ ಆಗಿದ್ದಾರೆ. ಈ ಬಗ್ಗೆ ಧನುಷ್ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟ (Gilli Nata) ಮತ್ತು ಅಶ್ವಿನಿ ಗೌಡ ನಡುವೆ ಜಗಳ ಆಗಿತ್ತು. ಅದರಿಂದ ಗಿಲ್ಲಿಗೆ ಲಾಭ ಆಗಿದ್ದೇ ಹೆಚ್ಚು. ಅಶ್ವಿನಿ ಗೌಡ ಅವರು ವುಮನ್ ಕಾರ್ಡ್ ಪ್ಲೇ ಮಾಡಲು ಹೋಗಿ ವಿಫಲರಾದರು. ವಾರಾಂತ್ಯದಲ್ಲಿ ಅವರಿಗೆ ಕಿಚ್ಚ ಸುದೀಪ್ ಅವರು ಕ್ಲಾಸ್ ತೆಗೆದುಕೊಂಡರು. ಅದರ ಪರಿಣಾಮವಾಗಿ ಅಶ್ವಿನಿ ಗೌಡ (Ashwini Gowda) ಅವರು ಈಗ ಸೈಲೆಂಟ್ ಆಗಿದ್ದಾರೆ. ಈಗ ಅವರು ಸೈಲೆಂಟ್ ಆಗಿದ್ದರಿಂದ ಗಿಲ್ಲಿಗೆ ತೊಂದರೆ ಆಗಿದೆ ಎಂದು ಧನುಷ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಅವರು ಕಾವ್ಯ ಜೊತೆ ಕುಳಿತು ಮಾತನಾಡಿದ್ದಾರೆ. ‘ಗಿಲ್ಲಿಗೆ ಈಗ ಕಂಟೆಂಟ್ ಸಿಗುತ್ತಿಲ್ಲ. ಅವನಿಗೆ ಕಡಿಯಲು ಏನಾದರೂ ಬೇಕು. ಅಶ್ವಿನಿ ಮೇಡಂ ಸೈಲೆಂಟ್ ಆಗಿದ್ದರಿಂದ ಗಿಲ್ಲಿಗೆ ಸಮಸ್ಯೆ ಆಗಿದೆ. ಅದು ನನ್ನ ಕಣ್ಣಿಗೆ ಎದ್ದು ಕಾಣುತ್ತಿದೆ. ಅಶ್ವಿನಿ ಮೇಡಂ ಇದ್ದರೆ ಗಿಲ್ಲಿಗೆ ಮೈಲೇಜ್’ ಎಂದು ಧನುಷ್ ಹೇಳಿದ್ದಾರೆ. ಈ ಮಾತಿಗೆ ಕಾವ್ಯ ಅವರು ಯಾವ ರೀತಿ ಪ್ರತಿಕ್ರಿಯೆ ನೀಡಿದ್ದಾರೆ ಎಂಬುದು ತಿಳಿಯಲು ನವೆಂಬರ್ 25ರ ಸಂಚಿಕೆ ನೋಡಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More