AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಸ್ಥಳ ಪ್ರಕರಣ: ಅನಾಮಿಕ ಮುಸುಕುಧಾರಿಯ ಅಸಲಿ ಮುಖ, ಫೋಟೊ ಬಹಿರಂಗ!

ಧರ್ಮಸ್ಥಳ ಪ್ರಕರಣ: ಅನಾಮಿಕ ಮುಸುಕುಧಾರಿಯ ಅಸಲಿ ಮುಖ, ಫೋಟೊ ಬಹಿರಂಗ!

Ganapathi Sharma
|

Updated on:Aug 23, 2025 | 12:23 PM

Share

ಧರ್ಮಸ್ಥಳ ಪ್ರಕರಣದ ಕೇಂದ್ರಬಿಂದುವಾಗಿರುವ ಅನಾಮಿಕ ಮಾಸ್ಕ್​ಮ್ಯಾನ್​​ನ ನಿಜ ಮುಖ, ಹೆಸರು ಅನಾವರಣವಾಗಿದೆ. ಸದ್ಯ ಆತನನ್ನು ಎಸ್​ಐಟಿ ವಶಕ್ಕೆ ಪಡೆದಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸುತ್ತಿದೆ. ಅನಾಮಿಕನ ಹೆಸರು ಬಹಿರಂಗವಾಗಿದ್ದು, ಸಿಎ ಚಿನ್ನಯ್ಯ ಅಲಿಯಾಸ್ ಚೆನ್ನ ಎಂಬುದು ಗೊತ್ತಾಗಿದೆ. ಆತನ ಫೋಟೊ ಕೂಡ ರಿವೀಲ್ ಆಗಿದ್ದು, ಇಲ್ಲಿದೆ ವಿಡಿಯೋ.

ಮಂಗಳೂರು, ಆಗಸ್ಟ್ 23: ಧರ್ಮಸ್ಥಳ ಆಸುಪಾಸಿನಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಹೇಳಿಕೊಂಡಿದ್ದ ಅನಾಮಿಕನ ಅಸಲಿ ಮುಖ ಈಗ ಅನಾವರಣಗೊಂಡಿದೆ. ಎಸ್​ಐಟಿ ಅಧಿಕಾರಿಗಳು ಮಾಸ್ಕ್​​​ಮ್ಯಾನ್​​ನನ್ನು ಬಂಧಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ನ್ಯಾಯಾಲಯಕ್ಕೆ ಹಾಜರುಪಡಿಸುತ್ತಿದ್ದಾರೆ. ಅನಾಮಿಕ ಮೂಲತಃ ಮಂಡ್ಯ ಜಿಲ್ಲೆಯವನು ಎನ್ನಲಾಗಿದ್ದು, ಆತನ ಹೆಸರು ಸಿಎ ಚಿನ್ನಯ್ಯ ಅಲಿಯಾಸ್ ಚೆನ್ನ ಎಂದು ಹೇಳಲಾಗಿದೆ. ಸದ್ಯ ಆತ ಎಸ್​​ಐಟಿ ವಶದಲ್ಲಿದ್ದು, ತನಿಖೆ ನಡೆಯುತ್ತಿರುವ ಕಾರಣ ಹೆಚ್ಚಿನ ಮಾಹಿತಿ ನೀಡಲಾಗದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Aug 23, 2025 12:21 PM