ಧರ್ಮಸ್ಥಳ ಕೇಸ್: ಯುಟ್ಯೂಬರ್ ಸಮೀರ್ ಖಜಾನೆಗೆ ಕೈ ಹಾಕಿದ ಖಾಕಿ

Updated on: Aug 25, 2025 | 3:15 PM

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತಾನೇ ತೋಡಿದ ಗುಂಡಿಗೆ ಬಿದ್ದಿರುವ ಬುರುಡೆ ಚಿನ್ನಯ್ಯನ ವಿಚಾರಣೆ ತೀವ್ರಗೊಳಿಸಲಾಗಿದೆ. ಎಸ್​ಐಟಿ ಅಧಿಕಾರಿಗಳು ಚಿನ್ನಯ್ಯನ ಪೂರ್ವಾಪರ ಕೆದಕುತ್ತಿದ್ದಾರೆ. ಇದೀಗ ಎಸ್​ಐಟಿ ತನಿಖೆ ಧರ್ಮಸ್ಥಳ, ಬೆಳ್ತಂಗಡಿಯಿಂದ ಮಂಡ್ಯ ಮತ್ತು ತಮಿಳುನಾಡಿಗೂ ವಿಸ್ತರಿಸುತ್ತಿದೆ. ಮತ್ತೊಂದೆಡೆ ಧರ್ಮಸ್ಥಳದ ಪ್ರಕರಣ ಸಂಬಂಧ ವಿಡಿಯೋ ಮಾಡಿ ಭಾರೀ ಸುದ್ದಿಯಾಗಿದ್ದ ಯುಟ್ಯೂಬರ್ ಸಮೀರ್ ಎಂಡಿ ವಿಚಾರಣೆ ಸಹ ತೀವ್ರಗೊಂಡಿದೆ.

ಮಂಗಳೂರು, (ಆಗಸ್ಟ್ 25): ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತಾನೇ ತೋಡಿದ ಗುಂಡಿಗೆ ಬಿದ್ದಿರುವ ಬುರುಡೆ ಚಿನ್ನಯ್ಯನ ವಿಚಾರಣೆ ತೀವ್ರಗೊಳಿಸಲಾಗಿದೆ. ಎಸ್​ಐಟಿ ಅಧಿಕಾರಿಗಳು ಚಿನ್ನಯ್ಯನ ಪೂರ್ವಾಪರ ಕೆದಕುತ್ತಿದ್ದಾರೆ. ಇದೀಗ ಎಸ್​ಐಟಿ ತನಿಖೆ ಧರ್ಮಸ್ಥಳ, ಬೆಳ್ತಂಗಡಿಯಿಂದ ಮಂಡ್ಯ ಮತ್ತು ತಮಿಳುನಾಡಿಗೂ ವಿಸ್ತರಿಸುತ್ತಿದೆ. ಮತ್ತೊಂದೆಡೆ ಧರ್ಮಸ್ಥಳದ ಪ್ರಕರಣ ಸಂಬಂಧ ವಿಡಿಯೋ ಮಾಡಿ ಭಾರೀ ಸುದ್ದಿಯಾಗಿದ್ದ ಯುಟ್ಯೂಬರ್ ಸಮೀರ್ ಎಂಡಿ ವಿಚಾರಣೆ ಸಹ ತೀವ್ರಗೊಂಡಿದೆ. ನಿನ್ನೆ(ಆಗಸ್ಟ್​ 24) ಮೊದಲ ದಿನ ವಿಡಿಯೋ ಸಂಬಂಧ ಹತ್ತಾರು ಪ್ರಶ್ನೆಗಳನ್ನು ಕೇಳಿ ಮಾಹಿತಿ ಪಡೆದುಕೊಂಡಿದ್ದರು. ಆದ್ರೆ, ಎರಡನೇ ದಿನದ ವಿಚರಣೆಯಲ್ಲಿ ಯುಟ್ಯೂಬ್ ಆದಾಯದ ಮೂಲದ ಕೆದಕುತ್ತಿದ್ದಾರೆ. ಯುಟ್ಯೂಬ್ ಆದಾಯದ ದಾಖಲೆ ಕೇಳಲಾಗಿದ್ದು. ವೀಡಿಯೊ ಮಾಡಿದ ಉದ್ದೇಶ ‘ಹಣಕಾಸು ಲಾಭ’ ಆಗಿದೆಯೇ ಎಂದು ಪತ್ತೆ ಮಾಡಲು ತನಿಖಾಧಿಕಾರಿ ದಾಖಲೆ ಕೇಳಿದ್ದಾರೆ. ಹೆಚ್ಚಿನ ಅದಾಯಕ್ಕಾಗಿ ತಪ್ಪು ಹಾಗೂ ಸುಳ್ಳು ವಿಷಯ ಹಂಚಿದ್ದಾನೆಯೇ ಎಂದು ದೃಢಪಡಿಸಲು ಹಾಗೂ YouTube Monetization (AdSense account) ಮೂಲಕ ಆದಾಯ, ಬ್ಯಾಂಕ್ ಖಾತೆಗೆ ಟ್ರಾನ್ಸ್‌ಫರ್ ಆದ ಹಣದ ದಾಖಲೆ ಸಂಗ್ರಹಿಸುತ್ತಿದ್ದಾರೆ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More