Karaga Utsav Concludes: ಐತಿಹಾಸಿಕ ಬೆಂಗಳೂರು ಕರಗ ಶಕ್ತ್ಯೋತ್ಸದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರೂ ಪಾಲ್ಗೊಂಡರು!

Updated on: Apr 07, 2023 | 11:13 AM

ಬೇರೆ ಬೇರೆ ಊರು ಮತ್ತು ಪಕ್ಕದ ರಾಜ್ಯಗಳಿಂದ ಬಂದ‘ ಸಹಸ್ರಾರು ಕರಗ ಉತ್ಸವದಲ್ಲಿ ಪಾಲ್ಗೊಂಡರು. ತಿಗಳ ಸಮುದಾಯದ ಅರ್ಚಕ ವಿ ಜ್ಞಾನೇಂದ್ರ ಈ ಸಲವೂ ಕರಗವನ್ನು ಹೊತ್ತರು.

ಬೆಂಗಳೂರು: ನಗರದಲ್ಲಿ ಪ್ರತಿವರ್ಷ ನಡೆಯುವ ಐತಿಹಾಸಿಕ ಕರಗ ಶಕ್ತ್ಯೋತ್ಸದಲ್ಲಿ (Karaga Utsav) ಪಾಲ್ಗೊಳ್ಳಲು ಕೇವಲ ನಗರ ನಿವಾಸಿಗಳು ಮಾತ್ರವಲ್ಲ, ಬೇರೆ ಬೇರೆ ಊರುಗಳಿಂದ, ಪಕ್ಕದ ರಾಜ್ಯಗಳಿಂದಲೂ ಸಹಸ್ರಾರು ಜನ ಅಗಮಿಸುತ್ತಾರೆ. ಗುರುವಾರ ರಾತ್ರಿ ನಗರದ ಬೀದಿಗಳಲ್ಲಿ ಕರಗ ಉತ್ಸವ ಅತ್ಯಂತ ವಿಜೃಂಭಣೆ ಮತ್ತು ಭಕ್ತಿ ಶ್ರದ್ಧೆಗಳಿಂದ ನಡೆಯಿತು. ರಸ್ತೆಯುದ್ದಕ್ಕೂ ನೆರೆದಿದ್ದ ಲಕ್ಷಾಂತರ ಭಕ್ತರ ನಡುವೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರು (Dr Veerendra Heggade) ಕಾಣಿಸಿಕೊಂಡಿದ್ದು ಈ ಬಾರಿ ಕರಗ ಉತ್ಸವದ ಮತ್ತೊಂದು ವಿಶೇಷತೆಯಾಗಿತ್ತು. ತಿಗಳ ಸಮುದಾಯದ ಅರ್ಚಕ ವಿ ಜ್ಞಾನೇಂದ್ರ (V Jnanendra) ಈ ಸಲವೂ ಕರಗವನ್ನು ಹೊತ್ತರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More