ಚಿನ್ನಯ್ಯ ತಂದಿದ್ದ ಬುರುಡೆಗೆ ದೆಹಲಿ ಲಿಂಕ್: ದೊಡ್ಡ ವ್ಯಕ್ತಿಯನ್ನ ಭೇಟಿ ಮಾಡಿದ್ದ ಗ್ಯಾಂಗ್!

Edited By:

Updated on: Aug 24, 2025 | 1:30 PM

ಧರ್ಮಸ್ಥಳದಲ್ಲಿ ಶವಹೂತಿದ್ದಾಗಿ ಹೇಳಿದ್ದ ದೂರುದಾರ ಚಿನ್ನಯ್ಯ ಬಂಧನವಾಗಿದ್ದು, ಕ್ಷಣ ಕ್ಷಣಕ್ಕೂ ಹೊಸ ಅಂಶ ಆಚೆ ಬರುತ್ತಿದೆ. ಸದ್ಯ ಬೆಳ್ತಂಗಡಿ ಎಸ್‌ಐಟಿ ಕಚೇರಿಯಲ್ಲಿರುವ ಚಿನ್ನಯ್ಯನನ್ನು ಎಸ್ಐಟಿ ಅಧಿಕಾರಿಗಳು ತೀವ್ರ ವಿಚಾರಣೆಗೊಳಪಡಿಸಿದ್ದು, ಚಿನ್ನಯ್ಯ ಕೋರ್ಟ್​ ತೆಗೆದುಕೊಂಡು ಹೋಗಿದ್ದ ಮಾನವನ ತಲೆ ಬುರುಡೆ ಬಗ್ಗೆ ತನಿಖೆ ನಡೆಸಿದ್ದಾರೆ. ಬುರುಡೆ ಯಾರದ್ದು? ಎಲ್ಲಿಂದ ತಂದಿರುವುದು ಎನ್ನುವುದನ್ನು ಬಾಯ್ಬಿಡಿಸಲು ಎಸ್​ಐಟಿ ವಿಚಾರಣೆ ನಡೆಸಿದೆ. ಇನ್ನು ಮಾಸ್ಕ್ ಮ್ಯಾನ್ ತಂದ ಬುರುಡೆಯ Exclusive ಮಾಹಿತಿ ಟಿವಿ9ಗೆ ಲಭ್ಯವಾಗಿದೆ.

ಮಂಗಳೂರು, (ಆಗಸ್ಟ್ 24): ಧರ್ಮಸ್ಥಳದಲ್ಲಿ ಶವಹೂತಿದ್ದಾಗಿ ಹೇಳಿದ್ದ ದೂರುದಾರ ಚಿನ್ನಯ್ಯ ಬಂಧನವಾಗಿದ್ದು, ಕ್ಷಣ ಕ್ಷಣಕ್ಕೂ ಹೊಸ ಅಂಶ ಆಚೆ ಬರುತ್ತಿದೆ. ಸದ್ಯ ಬೆಳ್ತಂಗಡಿ ಎಸ್‌ಐಟಿ ಕಚೇರಿಯಲ್ಲಿರುವ ಚಿನ್ನಯ್ಯನನ್ನು ಎಸ್ಐಟಿ ಅಧಿಕಾರಿಗಳು ತೀವ್ರ ವಿಚಾರಣೆಗೊಳಪಡಿಸಿದ್ದು, ಚಿನ್ನಯ್ಯ ಕೋರ್ಟ್​ ತೆಗೆದುಕೊಂಡು ಹೋಗಿದ್ದ ಮಾನವನ ತಲೆ ಬುರುಡೆ ಬಗ್ಗೆ ತನಿಖೆ ನಡೆಸಿದ್ದಾರೆ. ಬುರುಡೆ ಯಾರದ್ದು? ಎಲ್ಲಿಂದ ತಂದಿರುವುದು ಎನ್ನುವುದನ್ನು ಬಾಯ್ಬಿಡಿಸಲು ಎಸ್​ಐಟಿ ವಿಚಾರಣೆ ನಡೆಸಿದೆ. ಇನ್ನು ಮಾಸ್ಕ್ ಮ್ಯಾನ್ ತಂದ ಬುರುಡೆಯ Exclusive ಮಾಹಿತಿ ಟಿವಿ9ಗೆ ಲಭ್ಯವಾಗಿದೆ. ಚಿನ್ನಯ್ಯ ತಂದಿದ್ದ ಬುರುಡೆಗೆ ದೆಹಲಿ ಲಿಂಕ್ ಬಯಲಿಗೆ ಬಂದಿದೆ. ಹೀಗಾಗಿ ಬುರುಡೆ ಸಮೇತ ದೆಹಲಿಗೆ ಕೊಂಡೊಯ್ದಿದ್ದು, ಅಲ್ಲಿ ಪ್ರತಿಷ್ಠಿತ ವ್ಯಕ್ಯಿಯನ್ನು ಭೇಟಿ ಮಾಡಿ ಬುರುಡೆ ತೋರಿಸದ್ದ ಎನ್ನುವುದು ತಿಳಿದುಬಂದಿದೆ. ಇನ್ನು ಧರ್ಮಸ್ಥಳ ಟು ದೆಹಲಿ ಬುರುಡೆ ಲಿಂಕ್​ ನ ಸ್ಫೋಟಕ ಸುದ್ದಿ ಇಲ್ಲಿದೆ ನೋಡಿ.

Follow Us
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More