AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರ ವಿರೋಧದ ಮಧ್ಯೆಯೇ ಜಯನಗರ ವೃತ್ತದ ಕಡೆಗೆ ಯುವಕರ ಮೆರವಣಿಗೆ!

ಪೊಲೀಸರ ವಿರೋಧದ ಮಧ್ಯೆಯೇ ಜಯನಗರ ವೃತ್ತದ ಕಡೆಗೆ ಯುವಕರ ಮೆರವಣಿಗೆ!

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Feb 24, 2026 | 11:29 AM

Share

ಧಾರವಾಡದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳು ಮತ್ತೊಮ್ಮೆ ಸಿಡಿದೆದ್ದಿದ್ದಾರೆ. ವಿದ್ಯಾರ್ಥಿಗಳು ಮತ್ತು ಯುವಕರು ಶ್ರೀನಗರ ವೃತ್ತದಲ್ಲಿ ಜಮಾಯಿಸಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಆಗ್ರಹಿಸಿದ್ದಾರೆ. ಪೊಲೀಸರ ವಿರೋಧದ ಮಧ್ಯೆಯೂ ಪ್ರತಿಭಟನಾಕಾರರು ಜಯನಗರ ವೃತ್ತದ ಕಡೆಗೆ ಮೆರವಣಿಗೆ ನಡೆಸಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಧಾರವಾಡ ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ. ಜನಾಸಮಂಕರ ವೇದಿಕೆಯ ಅಡಿಯಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಕಾಂಗ್ರೆಸ್ ನಾಯಕರ ಫೋಟೋಗಳನ್ನು ಹಿಡಿದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಧಾರವಾಡ, ಫೆಬ್ರವರಿ 24: ಧಾರವಾಡದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳು ಮತ್ತೊಮ್ಮೆ ಸಿಡಿದೆದ್ದಿದ್ದಾರೆ. ವಿದ್ಯಾರ್ಥಿಗಳು ಮತ್ತು ಯುವಕರು ಶ್ರೀನಗರ ವೃತ್ತದಲ್ಲಿ ಜಮಾಯಿಸಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಆಗ್ರಹಿಸಿದ್ದಾರೆ. ಪೊಲೀಸರ ವಿರೋಧದ ಮಧ್ಯೆಯೂ ಪ್ರತಿಭಟನಾಕಾರರು ಜಯನಗರ ವೃತ್ತದ ಕಡೆಗೆ ಮೆರವಣಿಗೆ ನಡೆಸಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಧಾರವಾಡ ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ. ಜನಾಸಮಂಕರ ವೇದಿಕೆಯ ಅಡಿಯಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಕಾಂಗ್ರೆಸ್ ನಾಯಕರ ಫೋಟೋಗಳನ್ನು ಹಿಡಿದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.