ಕವಿವಿ ಶುಲ್ಕ ಏರಿಕೆ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು

Edited By:

Updated on: Feb 05, 2026 | 5:40 PM

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಸ್‌ಸಿ/ಎಸ್‌ಟಿ ಪಿಎಚ್‌ಡಿ ವಿದ್ಯಾರ್ಥಿಗಳಿಗೆ ಸಾಮಾನ್ಯ ಶುಲ್ಕ ವಿಧಿಸಿರುವ ಆಡಳಿತ ಮಂಡಳಿ ನಿರ್ಧಾರದ ವಿರುದ್ಧ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 1,350 ರೂ.ನಿಂದ 4,000 ರೂ.ಗೆ ಶುಲ್ಕ ಏರಿಕೆಯಾಗಿದ್ದು, ವಿದ್ಯಾರ್ಥಿಗಳು ತಮ್ಮ ಸಂಶೋಧನಾ ಪ್ರಬಂಧಗಳನ್ನು ಸುಟ್ಟು, ಕುಲಪತಿಗಳ ಕಚೇರಿ ಮುಂದೆ ಕಣ್ಣೀರಿಟ್ಟಿದ್ದಾರೆ.

ಧಾರವಾಡ, ಫೆಬ್ರವರಿ 05: ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಸ್‌ಸಿ/ಎಸ್‌ಟಿ ಪಿಎಚ್‌ಡಿ ವಿದ್ಯಾರ್ಥಿಗಳಿಗೆ ಸಾಮಾನ್ಯ ಶುಲ್ಕ ವಿಧಿಸಿರುವ ಆಡಳಿತ ಮಂಡಳಿ ನಿರ್ಧಾರದ ವಿರುದ್ಧ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಾಗಿ ವಿಸಿ ಚೇಂಬರ್ ಬಳಿ ಸಂಶೋಧನಾ ಪ್ರಬಂಧವನ್ನು ಸುಟ್ಟುಹಾಕಿ ವಿದ್ಯಾರ್ಥಿಗಳು ಕಣ್ಣೀರಿಟ್ಟಿರುವಂತಹ ಘಟನೆ ನಡೆದಿದೆ. ಮೊದಲ ವರ್ಷ 1,350 ಶುಲ್ಕ ಕಟ್ಟಿದ್ದ ಸಂಶೋಧನಾ ವಿದ್ಯಾರ್ಥಿಗಳು, 2ನೇ ವರ್ಷಕ್ಕೆ 4,000 ರೂ. ಶುಲ್ಕ ಪಾವತಿಸುವಂತೆ ಸೂಚಿಸಲಾಗಿದೆ. ಹೀಗಾಗಿ ಕವಿವಿ ಆಡಳಿತ ಮಂಡಳಿ ವಿರುದ್ಧ ಸಂಶೋಧನಾ ವಿದ್ಯಾರ್ಥಿಗಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us