ಕೈ ತಪ್ಪಿದ ಧಾರವಾಡ ಟಿಕೆಟ್​; ಹೆಬ್ಬಾಳ್ಕರ್ ಅಳಿಯ ರಜತ್ ಉಳ್ಳಾಗಡ್ಡಿಮಠ ಬೇಸರ

Edited By:

Updated on: Mar 22, 2024 | 10:56 PM

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾವು ಜೋರಾಗಿದೆ. ಇದರ ಮಧ್ಯೆ ಉಭಯ ಪಕ್ಷಗಳ ಟಿಕೆಟ್​ ಆಕಾಂಕ್ಷಿಗಳು, ಟಿಕೆಟ್ ಕೈ ತಪ್ಪಿದ್ದರಿಂದ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಅದರಂತೆ ಧಾರವಾಡ​ ಕ್ಷೇತ್ರ ಕೈತಪ್ಪಿದ್ದರಿಂದ ಹೆಬ್ಬಾಳ್ಕರ್ ಅಳಿಯ ರಜತ್ ಉಳ್ಳಾಗಡ್ಡಿಮಠ ಬೇಸರದಿಂದ ಹೊರಹಾಕಿದ್ದಾರೆ.

ಹುಬ್ಬಳ್ಳಿ, ಮಾ.22: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾವು ಜೋರಾಗಿದೆ. ಇದರ ಮಧ್ಯೆ ಉಭಯ ಪಕ್ಷಗಳ ಟಿಕೆಟ್​ ಆಕಾಂಕ್ಷಿಗಳು, ಟಿಕೆಟ್ ಕೈ ತಪ್ಪಿದ್ದರಿಂದ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಅದರಂತೆ ಧಾರವಾಡ​ ಕ್ಷೇತ್ರ ಕೈತಪ್ಪಿದ್ದರಿಂದ ಹೆಬ್ಬಾಳ್ಕರ್ ಅಳಿಯ ರಜತ್ ಉಳ್ಳಾಗಡ್ಡಿಮಠ(Rajat Ullagaddimat) ಬೇಸರದಿಂದ ಹೊರಹಾಕಿದ್ದಾರೆ. ‘ನಾನು ಕ್ಷೇತ್ರದಲ್ಲಿ ಸಂಚರಿಸಿ ಪಕ್ಷ ಸಂಘಟನೆ ಮಾಡಿದ್ದೆ. ಧಾರವಾಡ ಕ್ಷೇತ್ರದ ಅಭ್ಯರ್ಥಿಗಾಗಿ ನಡೆಸಿದ ಸಮೀಕ್ಷೆಯಲ್ಲಿ ನನ್ನ ಹೆಸರಿತ್ತು. ಆದರೆ, ಈಗ ಬೇರೆಯವರಿಗೆ ಧಾರವಾಡ ಕ್ಷೇತ್ರದ ಟಿಕೆಟ್ ಘೋಷಣೆಯಾಗಿದೆ ಎಂದು ಸಮಾನ ಮನಸ್ಕರ ಸಭೆಯಲ್ಲಿ ಬೇಸರ ವ್ಯಕ್ತಪಡಿಸಿದರು.

2023ರ ವಿಧಾನಸಭಾ ಚುನಾವಣೆಯಲ್ಲೂ ನನಗೆ ಟಿಕೆಟ್ ಕೈತಪ್ಪಿತ್ತು. ಚುನಾವಣೆಯಲ್ಲಿ ಪರೀಕ್ಷೆ ಬರೆದ್ರೂ ಆನ್ಸರ್ ಸೀಟ್ ಕಸಿದುಕೊಂಡು ಹೋದರೂ, ವೀಕ್ ಕ್ಯಾಂಡಿಡೇಟ್​ಗೆ ಟಿಕೆಟ್ ನೀಡಿದ್ರು, ಅವರು 10 ಅಂಕ ಪಡೆಯಲಿಲ್ಲ. ಪರೋಕ್ಷವಾಗಿ ಜಗದೀಶ್ ಶೆಟ್ಟರ್ ವಿರುದ್ಧ ಅಸಮಾಧಾನ ಹೊರಹಾಕಿದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More