AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಶಾಲಾ ಮಕ್ಕಳ ಮೇಲೆ ಕೋತಿ ದಾಳಿ

ಧಾರವಾಡ: ಶಾಲಾ ಮಕ್ಕಳ ಮೇಲೆ ಕೋತಿ ದಾಳಿ

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: ವಿವೇಕ ಬಿರಾದಾರ|

Updated on:Dec 03, 2024 | 2:51 PM

Share

ಧಾರವಾಡದ ಮದಾರಮಡ್ಡಿ ಬಡಾವಣೆಯಲ್ಲಿ ಶಾಲೆಗೆ ಹೋಗುತ್ತಿದ್ದ ಮಕ್ಕಳ ಮೇಲೆ ಕೋತಿ ದಾಳಿ ನಡೆದಿದೆ. ಈ ದಾಳಿಯಲ್ಲಿ ಒಬ್ಬ ಬಾಲಕನಿಗೆ ಗಂಭೀರ ಗಾಯಗಳಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋತಿಗಳ ಕಾಟದಿಂದಾಗಿ ಅಂಗನವಾಡಿ ಮತ್ತು ಒಂದನೇ ತರಗತಿಗೆ ರಜೆ ಘೋಷಿಸಲಾಗಿದೆ.ಪೊಲೀಸರು ಘಟನೆ ಸಂಬಂಧ ತನಿಖೆ ನಡೆಸುತ್ತಿದ್ದಾರೆ.

ಶಾಲಾ ಮಕ್ಕಳ ಮೇಲೆ ಕೋತಿ ದಾಳಿ ಮಾಡಿರುವ ಘಟನೆ ಧಾರವಾಡ ನಗರದ ಮದಾರಮಡ್ಡಿ ಬಡಾವಣೆಯಲ್ಲಿ ನಡೆದಿದೆ. ಓರ್ವ ಶಾಲಾ ಬಾಲಕನಿಗೆ ಗಂಭೀರ ಗಾಯವಾಗಿದೆ. ಬೆಳಿಗ್ಗೆ ಶಾಲೆಗೆ ಬಂದಿದ್ದ ಮಕ್ಕಳ ಮೇಲೆ ಕೋತಿ ದಾಳಿ ಮಾಡಿದೆ. ಕೋತಿ ಕಾಟ ಹಿನ್ನೆಲೆಯಲ್ಲಿ ಅಂಗನವಾಡಿ ಹಾಗೂ ಒಂದನೇ ತರಗತಿಗೆ ರಜೆ ನೀಡಲಾಗಿದೆ. ಗಾಯಗೊಂಡ ಬಾಲಕನನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಧಾರವಾಡ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published on: Dec 03, 2024 02:48 PM
Follow Us
Narasimha Murti Pyati
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More