ಧಾರವಾಡ: ಕ್ಯಾಪ್ಟನ್ ಪ್ರಾಂಜಲ್ ನೆನೆದು ತಾಯಿ ಕಣ್ಣೀರು; ಇಲ್ಲಿದೆ ಮನಕಲಕುವ ವಿಡಿಯೋ

Edited By: ಕಿರಣ್ ಹನುಮಂತ್​ ಮಾದಾರ್

Updated on: Mar 07, 2024 | 8:46 PM

ಇಂದು(ಮಾ.07) ಧಾರವಾಡ(Dharwad) ಜಿಲ್ಲಾಧಿಕಾರಿ ಕಚೇರಿ ಬಳಿಯ ಕಾರ್ಗಿಲ್ ಸ್ತೂಪಕ್ಕೆ ಕ್ಯಾಪ್ಟನ್ ಪ್ರಾಂಜಲ್ ಕುಟುಂಬ ಭೇಟಿ ನೀಡಿ ಹುತಾತ್ಮ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿದರು. ಈ ವೇಳೆ ಮಗ ಕ್ಯಾಪ್ಟನ್ ಪ್ರಾಂಜಲ್ ನೆನೆದು ​ ತಂದೆ ವೆಂಕಟೇಶ್ ಮತ್ತು ತಾಯಿ ಅನುರಾಧ ಅವರು ಭಾವುಕರಾಗಿದ್ದಾರೆ.

ಧಾರವಾಡ, ಮಾ.07: ನವೆಂಬರ್ 22ರಂದು ಉಗ್ರರೊಂದಿಗಿನ ಸೆಟಸಾಟದಲ್ಲಿ ಕ್ಯಾಪ್ಟನ್ ಪ್ರಾಂಜಲ್(Captain Pranjal) ಹುತಾತ್ಮರಾಗಿದ್ದರು. ಇಂದು(ಮಾ.07) ಧಾರವಾಡ(Dharwad) ಜಿಲ್ಲಾಧಿಕಾರಿ ಕಚೇರಿ ಬಳಿಯ ಕಾರ್ಗಿಲ್ ಸ್ತೂಪಕ್ಕೆ ಕ್ಯಾಪ್ಟನ್ ಪ್ರಾಂಜಲ್ ಕುಟುಂಬ ಭೇಟಿ ನೀಡಿ ಹುತಾತ್ಮ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿದರು. ಈ ವೇಳೆ ಮಗ ಕ್ಯಾಪ್ಟನ್ ಪ್ರಾಂಜಲ್ ನೆನೆದು ​ ತಂದೆ ವೆಂಕಟೇಶ್ ಮತ್ತು ತಾಯಿ ಅನುರಾಧ ಅವರು ಭಾವುಕರಾಗಿದ್ದಾರೆ. ಈ ವೇಳೆ ಮಾತನಾಡಿ, ‘ನಮಗೆ ಈಗ ಮಗನ ಆಸರೆ ಇಲ್ಲ. ಆದರೆ, ಸಮಾಜವೇ ನಮಗೆ ಆಸರೆಯಾಗಿ ನಿಂತಿದೆ. ಸಮಾಜ ಈಗ ನಮ್ಮೊಂದಿಗೆ ಇದೆ ಎಂದು ಪ್ರಾಂಜಲ್​ ತಂದೆ ವೆಂಕಟೇಶ್ ಭಾವುಕರಾದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More