ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರೊಟೆಸ್ಟ್; 50ಕ್ಕೂ ಹೆಚ್ಚು ಹೋರಾಟಗಾರರ ಬಂಧನ
ಧಾರವಾಡದಲ್ಲಿ 2.84 ಲಕ್ಷ ಖಾಲಿ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಜನಸಾಮಾನ್ಯರ ವೇದಿಕೆ ಮತ್ತು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ಅನುಮತಿ ನಿರಾಕರಿಸಿದರೂ ಹೋರಾಟಗಾರರು ಶ್ರೀನಗರ ವೃತ್ತದಲ್ಲಿ ಜಮಾಯಿಸಿದರು. ಭದ್ರತೆ ಹೆಚ್ಚಿಸಿ, ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದರೂ ಪ್ರತಿಭಟನೆ ಮುಂದುವರಿಸಿದ್ದರಿಂದ 50ಕ್ಕೂ ಹೆಚ್ಚು ಹೋರಾಟಗಾರರನ್ನು ಬಂಧಿಸಲಾಯಿತು. ಇದು ಸರ್ಕಾರಿ ಉದ್ಯೋಗದ ಬೇಡಿಕೆಯ ಗಂಭೀರತೆಯನ್ನು ತೋರಿಸುತ್ತದೆ.
ಧಾರವಾಡ, ಡಿಸೆಂಬರ್ 1: ರಾಜ್ಯದ ವಿವಿಧ ಇಲಾಖೆಗಳಲ್ಲಿರುವ ಖಾಲಿ ಸರ್ಕಾರಿ ಹುದ್ದೆಗಳನ್ನು ತಕ್ಷಣ ಭರ್ತಿಮಾಡಬೇಕೆಂದು ಆಗ್ರಹಿಸಿ ಧಾರವಾಡದಲ್ಲಿ ಜನಸಾಮಾನ್ಯರ ವೇದಿಕೆ ಇಂದು ಹೋರಾಟಕ್ಕೆ ಮುಂದಾಗಿದೆ. ವಿದ್ಯಾರ್ಥಿ ಸಂಘಟನೆಗಳು ಕೂಡಾ ಪ್ರತಿಭಟನೆಗೆ ಕೈಜೋಡಿಸಿದ್ದು, ಈ ಪ್ರತಿಭಟನೆಗೆ ಅನುಮತಿ ನೀಡಲು ಪೊಲೀಸರು ನಿರಾಕರಿಸಿದ್ದಾರೆ.
ಪ್ರತಿಭಟನೆಗೆ ಮುಖ್ಯ ಉದ್ದೇಶವೇನು?
ರಾಜ್ಯದಲ್ಲಿ ಖಾಲಿಯಿರುವ 2.84 ಲಕ್ಷ ಸರ್ಕಾರಿ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು ಮತ್ತು ಕೇಂದ್ರ ಸರ್ಕಾರವೂ ಸಹ ಖಾಲಿ ಹುದ್ದೆಗಳನ್ನು ಭರಿಸಬೇಕು ಎಂಬ ಮುಖ್ಯ ಉದ್ದೇಶವನ್ನಿಟ್ಟುಕೊಂಡು ಈ ಹೋರಾಟ ನಡೆಸಲಾಗುತ್ತಿದೆ. ಸೆಪ್ಟೆಂಬರ್ 25 ರಂದು ಬರೋಬ್ಬರಿ 5000 ವಿದ್ಯಾರ್ಥಿಗಳು ಹುದ್ದೆ ನೇಮಕಾತಿಗಾಗಿ ನಡೆಸಿದ್ದ ಬೃಹತ್ ಹೋರಾಟದಲ್ಲಿ ಸಂಭವಿಸಿದ್ದ ಅಹಿತಕರ ಘಟನೆಗಳನ್ನು ಗಮನದಲ್ಲಿಟ್ಟುಕೊಂಡು ಈ ಬಾರಿ ಅನುಮತಿ ನಿರಾಕರಿಸಲಾಗಿದೆ. ಆದರೆ ಅನುಮತಿ ನೀಡದಿದ್ದರೂ ಹೋರಾಟ ನಿಲ್ಲೋದಿಲ್ಲ ಎಂದು ಸಂಘಟನೆ ಮುಖಂಡರು ಸ್ಪಷ್ಟಪಡಿಸಿದ್ದಾರೆ.
ಹೇಗಿದೆ ಬಿಗಿ ಭದ್ರತೆ?
ನಗರದ ಶ್ರೀನಗರ ವೃತ್ತದಿಂದ 200 ಕ್ಕೂ ಹೆಚ್ಚು ಮಂದಿ ಪ್ರತಿಭಟನಾಕಾರರು ಪ್ರತಿಭಟನೆ ಆರಂಭಿಸಿದ್ದು, ವೃತ್ತದ ಸುತ್ತಮುತ್ತ ನೂರಾರು ಪೊಲೀಸರನ್ನು ನಿಯೋಜಿಸಲಾಗಿದೆ. ಭದ್ರತೆಗಾಗಿ ಒಬ್ಬ ಪೊಲೀಸ್ ಕಮಿಷನರ್, ಇಬ್ಬರು ಡಿಸಿಪಿ, ಇಬ್ಬರು ಎಸಿಪಿ, 13 ಇನ್ಸ್ಪೆಕ್ಟರ್ಗಳು, 16 ಪಿಎಸ್ಐಗಳು ಸೇರಿದಂತೆ ದಂಡ ಪಡೆ ಅಳವಡಿಸಲಾಗಿದೆ. ಪ್ರತಿಭಟನಾಕಾರರು ಹೋರಾಟ ಮಾಡುವ ಪಟ್ಟು ಹಿಡಿದ ಕಾರಣ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಎರಡು ಸರ್ಕಾರಿ ಬಸ್ಗಳನ್ನು ಕರೆಸಿ, ಸುಮಾರು 50ಕ್ಕೂ ಹೆಚ್ಚು ಹೋರಾಟಗಾರರನ್ನು ಬಂಧಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

