‘ಅಕ್ಟೋಬರ್​ 11ಕ್ಕೆ ಮಾರ್ಟಿನ್​ ಸಿನಿಮಾ ರಿಲೀಸ್​ ಆಗತ್ತೆ’: ಧ್ರುವ ಸರ್ಜಾ

‘ಇಲ್ಲಿಯೇ ನಾವು ಮಾರ್ಟಿನ್​ ಸಿನಿಮಾದ ರಿಲೀಸ್​ ದಿನಾಂಕ ಅನೌನ್ಸ್​ ಮಾಡಿದ್ದು ಯಾಕೆಂದರೆ, ನಾವು ಎಂದಿಗೂ ನಮ್ಮ ಮೂಲವನ್ನು ಮರೆಯಬಾರದು. ನಾವು ಕನ್ನಡದವರು. ಕರ್ನಾಟಕದಲ್ಲೇ ಮೊದಲು ಅನೌನ್ಸ್​ ಮಾಡಬೇಕು. ಇದು ನಿಮ್ಮ ಸಿನಿಮಾ. ದಯವಿಟ್ಟು ಎಲ್ಲರೂ ಈ ಸಿನಿಮಾವನ್ನು ನೋಡ್ತೀವಿ ಅಂತ ಭರವಸೆ ಕೊಡಿ’ ಎಂದು ಧ್ರುವ ಸರ್ಜಾ ಹೇಳಿದ್ದಾರೆ.

‘ಅಕ್ಟೋಬರ್​ 11ಕ್ಕೆ ಮಾರ್ಟಿನ್​ ಸಿನಿಮಾ ರಿಲೀಸ್​ ಆಗತ್ತೆ’: ಧ್ರುವ ಸರ್ಜಾ
|

Updated on: May 24, 2024 | 10:13 PM

ನಟ ಧ್ರುವ ಸರ್ಜಾ ಅವರು ‘ಮಾರ್ಟಿನ್​’ (Martin) ಸಿನಿಮಾಗಾಗಿ ಎರಡೂವರೆ ವರ್ಷಗಳ ಕಾಲ ಮೀಸಲು ಇಟ್ಟಿದ್ದರು. ಈ ಸಿನಿಮಾ ಯಾವಾಗ ಬಿಡುಗಡೆ ಆಗುತ್ತೆ ಎಂದು ಎಲ್ಲರೂ ಕೇಳುತ್ತಿದ್ದರು. ಇಂದು (ಮೇ 24) ಚಿತ್ರತಂಡದವರು ಸುದ್ದಿಗೋಷ್ಠಿ ನಡೆಸಿ ‘ಮಾರ್ಟಿನ್​’ ಸಿನಿಮಾದ ಬಿಡುಗಡೆ ದಿನಾಂಕವನ್ನು (Martin Release Date) ಘೋಷಿಸಿದ್ದಾರೆ. ಅಕ್ಟೋಬರ್​ 11ರಂದು ಸಿನಿಮಾ ರಿಲೀಸ್​ ಆಗಲಿದೆ. ಪ್ರೆಸ್​ಮೀಟ್​ನಲ್ಲಿ ಈ ಬಗ್ಗೆ ಧ್ರುವ ಸರ್ಜಾ (Dhruva Sarja) ಮಾತನಾಡಿದರು. ‘ಎರಡೂವರೆ ವರ್ಷ ನಾವು ಈ ಜರ್ನಿ ಮಾಡಿದ್ದೇವೆ. ಒಂದು ಫ್ರೇಮ್​ನಲ್ಲೂ ನಾವು ರಾಜಿ ಆಗಿಲ್ಲ. ಇದು ತಂತ್ರಜ್ಞರ ಸಿನಿಮಾ. ಇಷ್ಟು ಬೇಗ ಅವರಿಗೆ ಧನ್ಯವಾದ ಹೇಳುತ್ತಾ ನಾನು ಟೈಮ್​ ವೇಸ್ಟ್​ ಮಾಡಲ್ಲ. ನನಗೆ ತುಂಬ ಜವಾಬ್ದಾರಿ ಬಂದಿದ್ದೇ ತಂತ್ರಜ್ಞರ ಕಾರಣದಿಂದ. ಮೊದಲ ಬಾರಿಗೆ ನಮ್ಮ ಅಂಕಲ್​ ಕಥೆ ಮತ್ತು ಚಿತ್ರಕಥೆ ಮಾಡಿದ್ದಾರೆ. ಅದನ್ನು ನಾನು ಸರಿಯಾಗಿ ಕಾರ್ಯರೂಪಕ್ಕೆ ತರಬೇಕು ಎಂಬುದು ಇತ್ತು. ತುಂಬ ಭಯ-ಭಕ್ತಿಯಿಂದ ಕೆಲಸ ಮಾಡಿದ್ದೇವೆ. ಅಕ್ಟೋಬರ್​ 11ರಂದು ಸಿನಿಮಾ ಬಿಡುಗಡೆ ಆಗಲಿದೆ. ದಯವಿಟ್ಟು ನಿಮ್ಮ ಸ್ನೇಹಿತರಿಗೆಲ್ಲರಿಗೂ ಈ ಬಗ್ಗೆ ಹೇಳಿ’ ಎಂದಿದ್ದಾರೆ ಧ್ರುವ ಸರ್ಜಾ. ಈ ಸಿನಿಮಾಗೆ ಎ.ಪಿ. ಅರ್ಜುನ್​ ನಿರ್ದೇಶನ ಮಾಡಿದ್ದಾರೆ. ಉದಯ್​ ಮೆಹ್ತಾ ಬಂಡವಾಳ ಹೂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್