‘ರೈತನ ಮಗನಾಗಿ ಕಾವೇರಿ ಹೋರಾಟಕ್ಕೆ ನನ್ನ ಬೆಂಬಲ ಇದೆ’: ಧ್ರುವ ಸರ್ಜಾ
‘ಕಾವೇರಿ ನಮ್ಮೆಲ್ಲರ ತಾಯಿ. ಅದು ಕರುನಾಡಿನ ಜೀವ ನದಿ. ಆದಷ್ಟು ಬೇಗ ಈ ಸಮಸ್ಯೆಯನ್ನು ಬಗೆಹರಿಸಬೇಕು ಅಂತ ಕೇಳಿಕೊಳ್ಳುತ್ತೇನೆ. ನಮ್ಮ ಹಿರಿಯ ನಟರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೋ ಅದಕ್ಕೆ ನಾವು ಬದ್ಧರಾಗಿ ಇರುತ್ತೇವೆ. ಕನ್ನಡಿಗರಾಗಿ ನಾವೆಲ್ಲರೂ ಈ ಹೋರಾಟದಲ್ಲಿ ಇರುತ್ತೇವೆ’ ಎಂದು ಧ್ರುವ ಸರ್ಜಾ ಹೇಳಿದ್ದಾರೆ.
ಕರ್ನಾಟಕದಲ್ಲಿ ಕಾವೇರಿ ನೀರಿಗಾಗಿ ಹೋರಾಟದ ಕಿಚ್ಚು ಜೋರಾಗಿದೆ. ಕನ್ನಡ ಚಿತ್ರರಂಗ (Kannada Film Industry) ಕೂಡ ಈ ಹೋರಾಟದಲ್ಲಿ ಭಾಗಿ ಆಗಿದೆ. ಪ್ರಮುಖ ಕಲಾವಿದರು ರೈತರ ಬೆಂಬಲಕ್ಕೆ ನಿಂತಿದ್ದಾರೆ. ನಟ ಧ್ರುವ ಸರ್ಜಾ ಕೂಡ ಕಾವೇರಿ (Cauvery Water) ಹೋರಾಟಕ್ಕೆ ಸಾಥ್ ನೀಡಿದ್ದಾರೆ. ಈ ಬಗ್ಗೆ ಅವರು ತಮ್ಮ ನಿಲುವು ಏನು ಎಂಬುದನ್ನು ತಿಳಿಸಿದ್ದಾರೆ. ‘ಕಾವೇರಿ ನಮ್ಮೆಲ್ಲರ ತಾಯಿ. ಅದು ಕರುನಾಡಿನ ಜೀವ ನದಿ. ಈ ಸಮಸ್ಯೆಯನ್ನು ಎಲ್ಲರೂ ಆದಷ್ಟು ಬೇಗ ಬಗೆಹರಿಸಬೇಕು ಅಂತ ಕೇಳಿಕೊಳ್ಳುತ್ತೇನೆ. ನಮ್ಮ ಹಿರಿಯ ನಟರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೋ ಅದಕ್ಕೆ ನಾವು ಬದ್ಧರಾಗಿ ಇರುತ್ತೇವೆ. ಒಬ್ಬ ರೈತನ ಮಗನಾಗಿ, ಕನ್ನಡಿಗರಾಗಿ ನಾವೆಲ್ಲರೂ ಈ ಹೋರಾಟದಲ್ಲಿ ಇರುತ್ತೇವೆ’ ಎಂದು ಧ್ರುವ ಸರ್ಜಾ (Dhruva Sarja) ಹೇಳಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು

