ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ

Updated on: Apr 22, 2026 | 10:47 PM

ಬಹುನಿರೀಕ್ಷಿತ ‘ಕೆಡಿ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾಗೆ ಜೋಗಿ ಪ್ರೇಮ್ ಅವರು ನಿರ್ದೇಶನ ಮಾಡಿದ್ದಾರೆ. ಧ್ರುವ ಸರ್ಜಾ, ರಮೇಶ್ ಅರವಿಂದ್, ಸಂಜಯ್ ದತ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಸಿನಿಮಾದ ಟ್ರೇಲರ್ ಬಿಡುಗಡೆ ವೇದಿಕೆಯಲ್ಲಿ ಧ್ರುವ ಸರ್ಜಾ ಅವರು ಮಾತನಾಡಿದರು.

ಬಹುನಿರೀಕ್ಷಿತ ‘ಕೆಡಿ’ ಸಿನಿಮಾ (KD Movie) ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾಗೆ ಜೋಗಿ ಪ್ರೇಮ್ ಅವರು ನಿರ್ದೇಶನ ಮಾಡಿದ್ದಾರೆ. ಧ್ರುವ ಸರ್ಜಾ (Dhruva Sarja), ರಮೇಶ್ ಅರವಿಂದ್, ಸಂಜಯ್ ದತ್, ಶಿಲ್ಪಾ ಶೆಟ್ಟಿ, ರೀಷ್ಮಾ ನಾಣಯ್ಯ, ರವಿಚಂದ್ರನ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಇಂದು (ಏ.22) ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ‘ಕೆಡಿ’ ಸಿನಿಮಾದ ಟ್ರೇಲರ್ ಬಿಡುಗಡೆ ವೇದಿಕೆಯಲ್ಲಿ ಧ್ರುವ ಸರ್ಜಾ ಅವರು ಮಾತನಾಡಿದರು. ಆ ವೇಳೆ ರಕ್ಷಿತಾ ಪ್ರೇಮ್ (Rakshitha Prem) ಬಗ್ಗೆ ಧ್ರುವ ಒಂದು ಇಂಟರೆಸ್ಟಿಂಗ್ ವಿಷಯ ತಿಳಿಸಿದರು. ಮಧ್ಯರಾತ್ರಿ 2 ಗಂಟೆ ಮೇಲೆ ಫೋನ್ ಬಂದರೆ ಅದು ರಕ್ಷಿತಾ ಪ್ರೇಮ್ ಅವರದ್ದೇ ಅಂತ ಅರ್ಥ. ಸಿನಿಮಾ ಬಗ್ಗೆ ಮಾತನಾಡಲು ಅವರು ಕರೆ ಮಾಡಿದ್ದರು ಎಂದು ಧ್ರುವ ಸರ್ಜಾ ಹೇಳಿದ್ದಾರೆ. ವೇದಿಕೆ ಮೇಲೆ ಅವರು ಮಾತನಾಡಿದ ವಿಡಿಯೋ ಇಲ್ಲಿದೆ ನೋಡಿ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us