ರಕ್ಷಿತಾ ಭಾಷೆ ಬಗ್ಗೆ ಧ್ರುವಂತ ಮತ್ತೆ ಅಪಸ್ವರ; ಸುದೀಪ್ ಹೇಳಿದ್ದು ಮರೆತೇಹೋಯ್ತಾ?

Updated on: Nov 10, 2025 | 8:55 AM

ಈ ವಾರದ ನಾಮಿನೇಷನ್ ವಿಚಾರ ಮತ್ತೆ ಚರ್ಚೆಗೆ ಬಂದಿದೆ. ರಕ್ಷಿತಾ ಶೆಟ್ಟಿ ಹಾಗೂ ಗಿಲ್ಲಿ ನಟನ ಧ್ರುವಂತ್ ಅವರು ನಾಮಿನೇಟ್ ಮಾಡಿದ್ದಾರೆ. ಇದಕ್ಕೆ ಅವರು ತೆಗೆದುಕೊಂಡ ಕಾರಣಗಳು ಬೇರೆ ಬೇರೆ. ಹಾಗಾದರೆ ಅವರು ನೀಡಿದ ಕಾರಣಗಳು ಏನು? ಆ ಬಗ್ಗೆ ಇಲ್ಲಿದೆ ವಿವರ.

ಧ್ರುವಂತ್ ಅವರು ಕಳೆದ ವಾರ ರಕ್ಷಿತಾ ಶೆಟ್ಟಿ ಭಾಷೆ ಬಗ್ಗೆ ಟೀಕೆ ಮಾಡಿದ್ದರು. ಆದರೆ, ಸುದೀಪ್ ಅವರು ರಕ್ಷಿತಾನ ಬೆಂಬಲಿಸಿದ್ದರು. ‘ಈ ಭಾಷೆ ನಮಗೆ ಓಕೆ’ ಎಂದಿದ್ದರು ಸುದೀಪ್. ಇದನ್ನು ಧ್ರುವಂತ್ ಅವರು ಕಿವಿಮೇಲೆ ಹಾಕಿಕೊಂಡಂತೆ ಇಲ್ಲ. ಈ ವಾರ ನಾಮಿನೇಟ್ ಮಾಡುವಾಗ ಮತ್ತೆ ಅದೇ ವಿಚಾರ ಇಟ್ಟುಕೊಂಡು ನಾಮಿನೇಟ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More