ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ‘ಧುರಂಧರ್’ ನಟ ಆರ್. ಮಾಧವನ್: ವಿಡಿಯೋ ನೋಡಿ..

Updated on: Jun 23, 2026 | 9:33 PM

‘ಧುರಂಧರ್’ ಸೇರಿದಂತೆ ಹಲವು ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿರುವ ಆರ್. ಮಾಧವನ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಭಿಮಾನಿಗಳು ಹಾಗೂ ಆಪ್ತರು ಮಾಧವನ್ ಅವರಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ನವದೆಹಲಿ: ಖ್ಯಾತ ನಟ ಆರ್‌. ಮಾಧವನ್ (R. Madhavan) ಅವರಿಗೆ ಭಾರತ ಸರ್ಕಾರ ನೀಡುವ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ‘ಪದ್ಮಶ್ರೀ’ ಪುರಸ್ಕಾರವನ್ನು ನೀಡಿ ಗೌರವಿಸಲಾಗಿದೆ. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಧವನ್‌ಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ವಿಶೇಷ ಕ್ಷಣಕ್ಕೆ ಮಾಧವನ್ ಅವರ ಪತ್ನಿ ಸರಿತಾ ಹಾಗೂ ಪುತ್ರ ವೇದಾಂತ್ ಸಾಕ್ಷಿಯಾದರು. ಮಾಧವನ್ ಅವರು ಪ್ರಶಸ್ತಿ ಸ್ವೀಕರಿಸಲು ವೇದಿಕೆಯತ್ತ ಹೆಜ್ಜೆ ಹಾಕುತ್ತಿದ್ದಂತೆ, ಪ್ರೇಕ್ಷಕರ ಸಾಲಿನಲ್ಲಿದ್ದ ಪತ್ನಿ ಸರಿತಾ ಮತ್ತು ಮಗ ವೇದಾಂತ್ ಹೆಮ್ಮೆಯಿಂದ ಎದ್ದು ನಿಂತು ಚಪ್ಪಾಳೆ ತಟ್ಟುವ ಮೂಲಕ ಸಂಭ್ರಮಿಸಿದರು. ಇತ್ತೀಚೆಗೆ ಬಿಡುಗಡೆಯಾದ ‘ಧುರಂಧರ್’ ಸೇರಿದಂತೆ ಹಲವು ಚಿತ್ರಗಳಲ್ಲಿ ಅದ್ಭುತ ನಟನೆಯ ಮೂಲಕ ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿರುವ ಮಾಧವನ್ ಅವರಿಗೆ ದೇಶಾದ್ಯಂತ ಸಿನಿಪ್ರಿಯರು ಹಾಗೂ ಗಣ್ಯರು ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us