ಎಐಸಿಸಿ ಜೊತೆ ಇವತ್ತಿನ ಸಭೆಯ ಮಹತ್ವವನ್ನು ರಾಜ್ಯ ಕಾಂಗ್ರೆಸ್ ನಾಯಕರು ಅಂಡರ್ ಪ್ಲೇ ಮಾಡಿರುವರೇ?

|

Updated on: Aug 23, 2024 | 6:44 PM

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಗೃಹ ಸಚಿವ ಜಿ ಪರಮೇಶ್ವರ್ ಜೊತೆ ಎಐಸಿಸಿ ನಡೆಸುತ್ತಿರುವ ಸಭೆಗೆ ಹೆಚ್ಚಿನ ಮಹತ್ವ ಇದ್ದರೂ ರಾಜ್ಯ ಕಾಂಗ್ರೆಸ್ ಅದನ್ನು ಅಂಡರ್ ಪ್ಲೇ ಮಾಡುತ್ತಿದೆ ಅಂತ ಅನಿಸದಿರದು. ಹೈಕಮಾಂಡ್ ಮುಖ್ಯಮಂತ್ರಿ ಜೊತೆ ನಿಂತಿದೆ ಅಂತ ಶಿವಕುಮಾರ್ ಹೇಳಿದ್ದರೂ ಅನುಮಾನದ ಎಳೆ ಕನ್ನಡಿಗರ ಮನದಲ್ಲಿ ಮನೆ ಮಾಡಿದೆ.

ದೆಹಲಿ: ಈಗಾಗಲೇ ವರದಿಯಾಗಿರುವ ಹಾಗೆ ರಾಷ್ಟ್ರದ ರಾಜಧಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ ಮತ್ತು ಪಕ್ಷದ ಇತರ ರಾಷ್ಟ್ರೀಯ ಪ್ರಮುಖ ಪದಾಧಿಕಾರಿಗಳ ಜೊತೆ ರಾಜ್ಯದ ಕಾಂಗ್ರೆಸ್ ನಾಯಕರ ಮೀಟಿಂಗ್ ಶುರುವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಗೃಹ ಸಚಿವ ಜಿ ಪರಮೇಶ್ವರ್ ಮತ್ತು ರಾಜ್ಯದ ಇತರ ಕೆಲ ನಾಯಕರು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಕಚೇರಿ ತಲುಪಿದ ಸ್ವಲ್ಪ ಹೊತ್ತಲ್ಲೇ ರಾಹುಲ್ ಗಾಂಧಿಯವರು ಅಲ್ಲಿಗೆ ಆಗಮಿಸುತ್ತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ಕಚೇರಿ ಮುಂದೆ ನೆರೆದಿದ್ದ ಕೆಲ ಅಭಿಮಾನಿಗಳು ರಾಹುಲ್ ಗಾಂಧಿ ಕೀ ಜೈ ಅಂತ ಕೂಗಿ ತಮ್ಮ ಭಕ್ತಿ ಪ್ರದರ್ಶಿಸಿದರು. ಮುಡಾ ಹಗರಣ ಬೆಳಕಿಗೆ ಬಂದ ಮೇಲೆ ರಾಜ್ಯ ಸರ್ಕಾರದ ಬಗ್ಗೆ ವಿರೋಧ ಪಕ್ಷದ ನಾಯಕರು ಹಲವಾರು ಸಂಗತಿಗಳನ್ನು ಮಾಧ್ಯಮಗಳ ಮುಂದೆ ಹೇಳುತ್ತಿದ್ದಾರೆ. ಸಿದ್ದರಾಮಯ್ಯರನ್ನು ಮುಖ್ಯಮಂತ್ರಿ ಸ್ಥಾನದಿಂದ ಸರಿಸಿ ಅವರ ಸ್ಥಾನದಲ್ಲಿ ಬೇರೆಯವನ್ನು ಎಐಸಿಸಿ ನೇಮಿಸಲಿದೆ ಎಂದು ಹರಡಿರುವ ವದಂತಿ ಹೆಚ್ಚು ಪ್ರಾಮುಖ್ಯತೆ ಪಡೆದುಕೊಂಡಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಜೀವನಪರ್ಯಂತ ವಿರೋಧ ಪಕ್ಷದಲ್ಲಿ ಕೂರಲು ರೆಡಿಯಾಗಿ; ರಾಹುಲ್ ಗಾಂಧಿ ವಿರುದ್ಧ ಕಂಗನಾ ರಣಾವತ್ ವಾಗ್ದಾಳಿ

Follow us on