Diganth Manchale: ಸರ್ಜರಿ ಬಳಿಕ ವಾರ್ಡ್ಗೆ ಶಿಫ್ಟ್ ಆದ ದಿಗಂತ್; ಥಂಬ್ಸ್ ಅಪ್ ಮೂಲಕ ಸಿಗ್ನಲ್ ನೀಡಿದ ನಟ
Diganth Manchale Health Update: ಕುತ್ತಿಗೆ ಸರ್ಜರಿ ಬಳಿಕ ತಾವು ಕ್ಷೇಮ ಎಂದು ದಿಗಂತ್ ಮಂಚಾಲೆ ಸಿಗ್ನಲ್ ನೀಡಿದ್ದಾರೆ. ಸದ್ಯ ಈ ಫೋಟೋಗಳು ವೈರಲ್ ಆಗುತ್ತಿವೆ.
ನಟ ದಿಗಂತ್ ಮಂಚಾಲೆ ಅವರ ಅಭಿಮಾನಿಗಳಲ್ಲಿ ಮೂಡಿದ್ದ ಆತಂಕ ಕೊಂಚ ಕಡಿಮೆ ಆಗಿದೆ. ಗೋವಾದಲ್ಲಿ ಕುತ್ತಿಗೆಗೆ ತೀವ್ರವಾಗಿ ಪೆಟ್ಟು ಮಾಡಿಕೊಂಡಿದ್ದ ಅವರಿಗೆ ಈ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಆಪರೇಷನ್ ಸಕ್ಸಸ್ ಆಗಿದ್ದು, ದಿಗಂತ್ (Diganth) ಈಗ ಚೇರಿಸಿಕೊಳ್ಳುತ್ತಿದ್ದಾರೆ. ಈ ಸುದ್ದಿ ಕೇಳಿ ಅವರ ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಸರ್ಜರಿ ಮುಗಿದ ಬಳಿಕ ಅವರನ್ನು ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ. ಈ ವೇಳೆ ದಿಗಂತ್ ಅವರು ಥಂಬ್ಸ್ ಅಪ್ ಮಾಡಿದ್ದಾರೆ. ಆ ಮೂಲಕ ತಾವು ಕ್ಷೇಮ ಎಂದು ಸಿಗ್ನಲ್ ನೀಡಿದ್ದಾರೆ. ಸದ್ಯ ಈ ಫೋಟೋಗಳು ವೈರಲ್ ಆಗುತ್ತಿವೆ. ಅವರ ಆರೋಗ್ಯದ ಬಗ್ಗೆ ಅಪ್ಡೇಟ್ (Diganth Health Update) ತಿಳಿಯಲು ಫ್ಯಾನ್ಸ್ ಕಾದಿದ್ದಾರೆ. ಮಧ್ಯಾಹ್ನ 1.30ರ ಸುಮಾರಿಗೆ ಈ ಬಗ್ಗೆ ಐಂದ್ರಿತಾ ರೇ (Aindrita Ray) ಮತ್ತು ವೈದ್ಯರು ಮಾಹಿತಿ ನೀಡುವ ನಿರೀಕ್ಷೆ ಇದೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Jun 22, 2022 11:11 AM
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ

