ತನಿಖೆ ಅಂತ ಧರ್ಮಸ್ಥಳದಲ್ಲಿ ಉತ್ಖನನ ನಡೆಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಲಾಗುತ್ತಿದೆ: ವಿಜಯೇಂದ್ರ

ಅರುಣ್​ ಕುಮಾರ್​ ಬೆಳ್ಳಿ

Updated on: Aug 11, 2025 | 2:59 PM

ಬೆಂಗಳೂರು ಕಾಲ್ತುಳಿತ ಪ್ರಕರಣ ಮತ್ತು ರಾಹುಲ್ ಗಾಂಧಿಯವರ ಮತಗಳ್ಳತನ ಆರೋಪವನ್ನೂ ಸದನದಲ್ಲಿ ಚರ್ಚಿಸುವುದಾಗಿ ಹೇಳಿದ ವಿಜಯೇಂದ್ರ, ಮತಗಳ್ಳತನದ ಆರೋಪ ಮಾಡಿ ರಾಹುಲ್ ಗಾಂಧಿಯವರು ಓಡಿಹೋಗಿದ್ದಾರೆ, ಚುನಾವಣಾ ಆಯೋಗ ಅವರಿಂದ ಸ್ಪಷ್ಟೀಕರಣ ಕೇಳಿದೆ, ವಿಧಾನ ಸಭಾ ಅಧಿವೇಶನವನ್ನ 8-10 ದಿನಗಳಿಗೆ ನಿಗದಿಗೊಳಸುವ ಬದಲು 15-20 ದಿನ ನಡೆಸಿದರೆ ಎಲ್ಲ ಪ್ರಶ್ನೆಗಳಿಗೆ ತಾರ್ಕಿಕ ಅಂತ್ಯ ಕಾಣಿಸಬಹುದು ಎಂದು ವಿಜಯೇಂದ್ರ ಹೇಳಿದರು.

ಬೆಂಗಳೂರು, ಆಗಸ್ಟ್ 11: ಇವತ್ತಿನಿಂದ ವಿಧಾನಸಭಾ ಅಧಿವೇಶನ (Assembly session) ಶುರುವಾಗಿದೆ ಮತ್ತು ಸದನವನ್ನು ಪ್ರವೇಶಿಸುವ ಮೊದಲು ನಮ್ಮ ವರದಿಗಾರನೊಂದಿಗೆ ಮಾತಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಅಧಿವೇಶನದಲ್ಲಿ ಧರ್ಮಸ್ಥಳದ ಪ್ರಕರಣವನ್ನು ಚರ್ಚಿಸಿ ಮುಖ್ಯಮಂತ್ರಿಯವರಿಂದ ಸ್ಪಷ್ಟ ಉತ್ತರ ಪಡೆಯಲಾಗುವುದು ಎಂದು ಹೇಳಿದರು. ಸರ್ಕಾರ ಪ್ರಕರಣದ ತನಿಖೆಗಾಗಿ ಎಸ್​ಐಟಿ ರಚನೆ ಮಾಡಿದಾಗ ನಾವೂ ಕ್ರಮವನ್ನು ಸ್ವಾಗತಿಸಿದ್ದೆವು. ಆದರೆ ತನಿಖೆಯ ನೆಪದಲ್ಲಿ ಅಲ್ಲಿ ಅಗೆಯುವುದನ್ನು ಬಿಟ್ಟರೆ ಬೇರೇನೂ ಆಗುತ್ತಿಲ್ಲ, ಧರ್ಮಸ್ಥಳ ಮಂಜುನಾಥ ಸಹಸ್ರಾರು ಭಕ್ತಾದಿಗಳ ಧಾರ್ಮಿಕ ಭಾವನೆಗಳಿಗೆ ಇದರಿಂದ ಧಕ್ಕೆಯಾಗುತ್ತಿದೆ, ಹಾಗಾಗಿ ಸರ್ಕಾರದ ಉತ್ತರ ಪಡೆಯುವುದು ಅತ್ಯವಶ್ಯಕವಾಗಿದೆ ಎಂದು ವಿಜಯೇಂದ್ರ ಹೇಳಿದರು.

ಇದನ್ನೂ ಓದಿ:  ರಾಷ್ಟ್ರದ ಸಾಂವಿಧಾನಿಕ ಸಂಸ್ಥೆಗಳನ್ನು ಕಾಂಗ್ರೆಸ್ ನಾಯಕರು ಅಪಮಾನಿಸುತ್ತಿದ್ದಾರೆ: ಬಿವೈ ವಿಜಯೇಂದ್ರ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.