ಚಿತ್ರದುರ್ಗದಲ್ಲಿ ಅತ್ತೆ-ಸೊಸೆಯರ‌ ಡಿಕ್ಕಿ ಹಬ್ಬ: ಹೇಗೆ ಡಿಚ್ಚಿ ಹೊಡಿತಾರೆ ವಿಡಿಯೋ ನೋಡಿ

Edited By:

Updated on: Mar 07, 2024 | 9:22 AM

ಚಿತ್ರದುರ್ಗದಲ್ಲಿ ವಿಚಿತ್ರ ಆಚರಣೆಯೊಂದು ಗಮನ ಸೆಳೆದಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನನ್ನಿವಾಳ ಗ್ರಾಮದಲ್ಲಿ ಅತ್ತೆ-ಸೊಸೆಯರ ಡಿಕ್ಕಿ ಹಬ್ಬ ಆಚರಿಸಲಾಯಿತು. ಮ್ಯಾಸಬೇಡ ಬುಡಕಟ್ಟು ಸಂಸ್ಕೃತಿಯ ಸಾಂಪ್ರದಾಯಿಕ ಆಚರಣೆ ಇದಾಗಿದೆ.

ಚಿತ್ರದುರ್ಗ, ಮಾರ್ಚ್​ 07: ಚಿತ್ರದುರ್ಗದಲ್ಲಿ ವಿಚಿತ್ರ ಆಚರಣೆಯೊಂದು ಗಮನ ಸೆಳೆದಿದೆ. ಚಿತ್ರದುರ್ಗ (Chitradurga) ಜಿಲ್ಲೆ ಚಳ್ಳಕೆರೆ (Challakere) ತಾಲೂಕಿನ ನನ್ನಿವಾಳ ಗ್ರಾಮದಲ್ಲಿ ಅತ್ತೆ-ಸೊಸೆಯರ ಡಿಕ್ಕಿ ಹಬ್ಬ ಆಚರಿಸಲಾಯಿತು. ಮ್ಯಾಸಬೇಡ ಬುಡಕಟ್ಟು ಸಂಸ್ಕೃತಿಯ ಸಾಂಪ್ರದಾಯಿಕ ಆಚರಣೆ ಇದಾಗಿದೆ. 12 ಪೆಟ್ಟಿಗೆ ದೇವರ ಗುಗ್ಗರಿ ಹಬ್ಬದ ಅಂಗವಾಗಿ ಡಿಕ್ಕಿ ಹಬ್ಬ ಆಚರಿಸಲಾಗುತ್ತದೆ. ಗುಗ್ಗರಿ ಹಬ್ಬ ಮಾರ್ಚ್ 2 ರಿಂದ ಮಾರ್ಚ್ 7ರ ವರೆಗೆ ಒಂದು ವಾರ ನಡೆಯುತ್ತದೆ. ಮ್ಯಾಸಬೇಡರ ಆರಾಧ್ಯ ದೈವ ಗಾದ್ರಿಪಾಲನಾಯಕ (ಮುತ್ತಯ್ಯ ದೇವರು) ಹುಲಿ ಜೊತೆ ಸೆಣೆಸಾಡಿದ್ದರಂತೆ. ಮ್ಯಾಸಬೇಡರ ಸಾಂಸ್ಕೃತಿಕ ನಾಯಕ ಗಾದ್ರಿಪಾಲನಾಯಕ ಹುಲಿ ಜತೆ ಸೆಣೆಸಾಟದ ಸ್ಮರಣಾರ್ಥ ಡಿಕ್ಕಿ ಹಬ್ಬ ಆಚರಿಸಲಾಗುತ್ತದೆ. ಬಂಗಾರ ದೇವರು ಗಾದ್ರಿ ಪಾಲನಾಯಕನಿಗೆ ತೆಂಗಿನಕಾಯಿ ಒಡೆಯುವುದಿಲ್ಲ. ಹೀಗಾಗಿ ತೆಂಗಿನಕಾಯಿ ರೀತಿ ತಲೆ ಇರುವುದರಿಂದ ಅತ್ತೆ-ಸೊಸೆಯಂದಿರು ಪರಸ್ಪರ ಡಿಚ್ಚಿ ಹೊಡೆದುಕೊಳ್ಳುತ್ತಾರೆ. ಡಿಕ್ಕಿ ಹಬ್ಬಕ್ಕೆ ಮುತ್ತಯ್ಯ ದೇವರು ಗುಡಿ ಬಳಿ ನಿನ್ನೆ (ಮಾ.06)ರ ಸಂಜೆ ಸಾಂಕೇತಿಕವಾಗಿ ಆಚರಿಸಲಾಯಿತು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್​ ಮಾಡಿ

Published on: Mar 07, 2024 09:16 AM
Follow Us
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More