AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Who would be CM? ಮುಖ್ಯಮಂತ್ರಿ ಆಯ್ಕೆ ಗೊಂದಲ ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರ, ಕಾಮೆಂಟ್ ಮಾಡಲಾರೆ: ಬಸವರಾಜ ಬೊಮ್ಮಾಯಿ, ಹಂಗಾಮಿ ಸಿಎಂ

Who would be CM? ಮುಖ್ಯಮಂತ್ರಿ ಆಯ್ಕೆ ಗೊಂದಲ ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರ, ಕಾಮೆಂಟ್ ಮಾಡಲಾರೆ: ಬಸವರಾಜ ಬೊಮ್ಮಾಯಿ, ಹಂಗಾಮಿ ಸಿಎಂ

ಅರುಣ್​ ಕುಮಾರ್​ ಬೆಳ್ಳಿ
|

Updated on: May 16, 2023 | 1:00 PM

Share

ಅದು ಅವರ ಆಂತರಿಕ ವಿಚಾರ, ತಾವೇನೂ ಕಾಮೆಂಟ್ ಮಾಡುವುದಿಲ್ಲ, ಜನರೆಲ್ಲ ಕಾಯುತ್ತಿದ್ದಾರೆ, ನಾವು ಸಹ ಕಾಯೋಣ ಅಂತ ಬೊಮ್ಮಾಯಿ ಹೇಳಿದರು.

ಬೆಂಗಳೂರು: ಕಾಂಗ್ರೆಸ್ ಪಕ್ಷ ಸರ್ಕಾರ ರಚಿಸುವವರೆಗೆ ಹಂಗಾಮಿ ಮುಖ್ಯಮಂತ್ರಿಯಾಗಿ (outgoing CM) ಮುಂದವರೆದಿರುವ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ (Krishna) ಹಿರಿಯ ಅಧಿಕಾರಿಗಳೊಂದಿಗೆ (senior officials) ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದರು. ಮುಖ್ಯಮಂತ್ರಿ ಆಯ್ಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದಲ್ಲಿ ನಡೆದಿರುವ ಕಸರತ್ತಿನ ಬಗ್ಗೆ ಪ್ರಶ್ನೆಸಿದಾಗ ಅವರು ಟೀಕಿಸುವ ಗೋಜಿಗೆ ಹೋಗಲಿಲ್ಲ. ಕ್ಷೀಣ ಸ್ವರದಲ್ಲಿ ಬೊಮ್ಮಾಯಿ, ಅದು ಅವರ ಆಂತರಿಕ ವಿಚಾರ, ತಾವೇನೂ ಕಾಮೆಂಟ್ ಮಾಡುವುದಿಲ್ಲ ಎಂದರು. ಜನರೆಲ್ಲ ಕಾಯುತ್ತಿದ್ದಾರೆ, ನಾವು ಸಹ ಕಾಯೋಣ ಅಂತ ಬೊಮ್ಮಾಯಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More