AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಸಿಲುಕಿ ಹೈರಾಣು

ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಸಿಲುಕಿ ಹೈರಾಣು

ದಿಲೀಪ್​, ಚೌಡಹಳ್ಳಿ
| Edited By: |

Updated on: Jul 26, 2024 | 9:57 PM

Share

ಕೊಲೆ ಕೇಸ್​ನಲ್ಲಿ ನಟ ದರ್ಶನ್​ ಅವರು ಜೈಲುವಾಸ ಅನುಭವಿಸುತ್ತಿದ್ದಾರೆ. ಅವರ ಫ್ಯಾಮಿಲಿಯವರು ದೇವರ ಮೊರೆಹೋಗಿದ್ದಾರೆ. ದರ್ಶನ್​ ಅವರ ತಮ್ಮ ದಿನಕರ್​ ತೂಗುದೀಪ ಇಂದು (ಜುಲೈ 26) ಮೈಸೂರಿಗೆ ಬಂದು ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ. ಅವರ ಜೊತೆ ಖ್ಯಾತ ಹಾಸ್ಯ ನಟ ಚಿಕ್ಕಣ್ಣ ಕೂಡ ಇದ್ದರು. ಭಾರಿ ಜನಜಂಗುಳಿ ನಡುವೆ ಅವರು ದೇವರ ಆಶೀರ್ವಾದ ಪಡೆದು ಬಂದಿದ್ದಾರೆ.

ನಟ ದರ್ಶನ್​ ಅವರ ಕುಟುಂಬದವರು ಹಲವು ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಅತ್ತ, ದರ್ಶನ್​ ಪತ್ನಿ ವಿಜಯಲಕ್ಷ್ಮಿ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿದ್ದರೆ, ಇತ್ತ ದರ್ಶನ್​ ಸಹೋದರ ದಿನಕರ್ ತೂಗುದೀಪ ಅವರು ಮೈಸೂರಿನಲ್ಲಿ ಚಾಮುಂಡೇಶ್ವರಿಯ ದರ್ಶನಕ್ಕೆ ಬಂದಿದ್ದಾರೆ. ದಿನಕರ್ ತೂಗುದೀಪ ಅವರ ಫ್ಯಾಮಿಲಿ ಜೊತೆ ನಟ ಚಿಕ್ಕಣ್ಣ ಕೂಡ ಸಾಥ್ ನೀಡಿದ್ದಾರೆ. ದೇವಸ್ಥಾನದಲ್ಲಿ ಅಪಾರ ಸಂಖ್ಯೆಯ ಭಕ್ತಾದಿಗಳು ನೆರೆದಿದ್ದರು. ಜನಜಂಗುಳಿಯಲ್ಲಿ ಸರದಿ ಸಾಲಿನಲ್ಲಿ ನಿಂತ ದಿನಕರ್​, ಚಿಕ್ಕಣ್ಣ ಮುಂತಾದವರು ಹೈರಾಣಾದರು. ಅದರ ನಡುವೆಯೂ ಚಿಕ್ಕಣ್ಣ ಜೊತೆ ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು. ಈ ಸಂದರ್ಭದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Dileep CP
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More