ನಟ ದರ್ಶನ್ ಅವರ ಕುಟುಂಬದವರು ಹಲವು ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಅತ್ತ, ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿದ್ದರೆ, ಇತ್ತ ದರ್ಶನ್ ಸಹೋದರ ದಿನಕರ್ ತೂಗುದೀಪ ಅವರು ಮೈಸೂರಿನಲ್ಲಿ ಚಾಮುಂಡೇಶ್ವರಿಯ ದರ್ಶನಕ್ಕೆ ಬಂದಿದ್ದಾರೆ. ದಿನಕರ್ ತೂಗುದೀಪ ಅವರ ಫ್ಯಾಮಿಲಿ ಜೊತೆ ನಟ ಚಿಕ್ಕಣ್ಣ ಕೂಡ ಸಾಥ್ ನೀಡಿದ್ದಾರೆ. ದೇವಸ್ಥಾನದಲ್ಲಿ ಅಪಾರ ಸಂಖ್ಯೆಯ ಭಕ್ತಾದಿಗಳು ನೆರೆದಿದ್ದರು. ಜನಜಂಗುಳಿಯಲ್ಲಿ ಸರದಿ ಸಾಲಿನಲ್ಲಿ ನಿಂತ ದಿನಕರ್, ಚಿಕ್ಕಣ್ಣ ಮುಂತಾದವರು ಹೈರಾಣಾದರು. ಅದರ ನಡುವೆಯೂ ಚಿಕ್ಕಣ್ಣ ಜೊತೆ ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು. ಈ ಸಂದರ್ಭದ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.