ದರ್ಶನ್ ನೋವು ನೋಡಿ ಖುಷಿಪಡುವ ಕೆಲವರು ಇದ್ದಾರೆ: ನಿರ್ದೇಶಕ ಪ್ರೇಮ್

Updated on: Sep 03, 2025 | 7:38 PM

‘ಪ್ರಪಂಚದಲ್ಲಿ ನಡೆಯುವ ಎಲ್ಲವನ್ನೂ ಮಾಧ್ಯಮದವರು ತೋರಿಸುತ್ತಾರೆ. ಒಳ್ಳೆಯದು, ಕೆಟ್ಟದ್ದು ನಿರ್ಧಾರ ಮಾಡುವುದು ಜನರಿಗೆ ಬಿಟ್ಟಿದ್ದು’ ಎಂದು ನಿರ್ದೇಶಕ ಜೋಗಿ ಪ್ರೇಮ್ ಅವರು ಹೇಳಿದ್ದಾರೆ. ದರ್ಶನ್ ಜೈಲಿಗೆ ಹೋಗುವುದಕ್ಕೂ ಮುನ್ನ ಅವರನ್ನು ಪ್ರೇಮ್ ಭೇಟಿ ಮಾಡಿದ್ದರು. ಆ ಕುರಿತು ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ.

ನಟ ದರ್ಶನ್ (Darshan) ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿ ಜೈಲು ಸೇರಿದ್ದಾರೆ. ಈ ಬಗ್ಗೆ ಪ್ರಸಾರ ಆಗುತ್ತಿರುವ ಸುದ್ದಿಗಳ ಬಗ್ಗೆ ನಿರ್ದೇಶಕ ಜೋಗಿ ಪ್ರೇಮ್ ಅವರು ಮಾತನಾಡಿದ್ದಾರೆ. ‘ದರ್ಶನ್ ಸುದ್ದಿಯನ್ನು ಮಿಲಿಯನ್​​ಗಟ್ಟಲೆ ಜನರು ನೋಡುತ್ತಾರೆ. ದರ್ಶನ್​​ ಅವರಿಗೆ ನೋವಿದೆ. ಕೆಲವರದ್ದು ಸೇಡಿಸ್ಟ್ ಮನಸ್ಥಿತಿ. ದರ್ಶನ್ ಅವರ ನೋವು ನೋಡಿ ಕೆಲವರಿಗೆ ಖುಷಿ ಆಗುತ್ತದೆ. ಅಂಥವರ ಮನಸ್ಥಿತಿಯನ್ನು ದೇವರೇ ಬದಲಾಯಿಸಬೇಕು’ ಎಂದು ಜೋಗಿ ಪ್ರೇಮ್ (Jogi Prem) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More