AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಪ್ರಕರಣದ ಬಗ್ಗೆ ಹಳೆ ಗೆಳೆಯ ಓಂ ಪ್ರಕಾಶ್ ರಾವ್ ಮಾತು

ದರ್ಶನ್ ಪ್ರಕರಣದ ಬಗ್ಗೆ ಹಳೆ ಗೆಳೆಯ ಓಂ ಪ್ರಕಾಶ್ ರಾವ್ ಮಾತು

ಮಂಜುನಾಥ ಸಿ.
|

Updated on: Jun 23, 2024 | 2:28 PM

Share

ದರ್ಶನ್ ತೂಗುದೀಪ ಜೊತೆಗೆ ಈ ಹಿಂದೆ ಸಿನಿಮಾ ಮಾಡಿ ಬಾಂಧವ್ಯ ಹೊಂದಿದ್ದ ಓಂ ಪ್ರಕಾಶ್ ರಾವ್ ಆ ನಂತರ ಪರಸ್ಪರ ದೂರಾಗಿದ್ದರು. ಇದೀಗ ದರ್ಶನ್ ಕೊಲೆ ಆರೋಪದಲ್ಲಿ ಜೈಲು ಸೇರಿರುವ ಸಂದರ್ಭದಲ್ಲಿ ಓಂ ಪ್ರಕಾಶ್, ದರ್ಶನ್ ಕುರಿತು ಮಾತನಾಡಿದ್ದಾರೆ.

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿರುವ ನಟ ದರ್ಶನ್​ ಕುರಿತು ಹಲವರು ತಮ್ಮ ತಮ್ಮ ಅಭಿಪ್ರಾಯಗಳನ್ನು ಹೊರಹಾಕುತ್ತಿದ್ದಾರೆ. ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ, ನಟ, ನಿರ್ಮಾಪಕರೂ ಆಗಿರುವ ಓಂ ಪ್ರಕಾಶ್ ರಾವ್ ಈ ಹಿಂದೆ ದರ್ಶನ್ ಜೊತೆ ಸಿನಿಮಾ ಮಾಡಿದ್ದು, ಆ ನಂತರ ಕೆಲವು ಕಾರಣಗಳಿಗಾಗಿ ಪರಸ್ಪರ ದೂರಾದರು. ಇದೀಗ ದರ್ಶನ್ ಕೊಲೆ ಆರೋಪಿಯಾಗಿ ಜೈಲು ಸೇರಿರುವ ಕಾರಣ ಓಂ ಪ್ರಕಾಶ್ ರಾವ್, ನಟ ದರ್ಶನ್ ಕುರಿತಾಗಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಒಳ್ಳೆಯ ಸಿನಿಮಾಗಳು, ಅಭಿಮಾನಿಗಳು, ಕುಟುಂಬ ಎಲ್ಲವನ್ನೂ ಹೊಂದಿದ್ದ ದರ್ಶನ್​ಗೆ ಇದು ಬೇಕಿರಲಿಲ್ಲ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More