ಸಿನಿಮಾ ಸೆಟ್​​ನಲ್ಲಿ ಹೇಗಿರುತ್ತಿದ್ದರು ಚಂದನ್-ನಿವೇದಿತಾ: ನಿರ್ದೇಶಕ ಮಾತು

ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ವಿಚ್ಛೇದನ ಪಡೆದುಕೊಂಡಿದ್ದಾರೆ. ಈ ಇಬ್ಬರು ಪತಿ-ಪತ್ನಿಯಾಗಿ ನಟಿಸುತ್ತಿರುವ ‘ಕ್ಯಾಂಡಿಕ್ರಶ್’ ಸಿನಿಮಾದ ಚಿತ್ರೀಕರಣ ಇನ್ನೂ ಚಾಲ್ತಿಯಲ್ಲಿದೆ. ಈ ಸಿನಿಮಾದ ನಿರ್ದೇಶಕ ಪುನೀತ್, ಚಂದನ್ ಹಾಗೂ ನಿವೇದಿತಾ ಸಿನಿಮಾ ಸೆಟ್​ನಲ್ಲಿ ಹೇಗಿರುತ್ತಿದ್ದರು ಎಂಬ ಬಗ್ಗೆ ಮಾತನಾಡಿದ್ದಾರೆ.

ಸಿನಿಮಾ ಸೆಟ್​​ನಲ್ಲಿ ಹೇಗಿರುತ್ತಿದ್ದರು ಚಂದನ್-ನಿವೇದಿತಾ: ನಿರ್ದೇಶಕ ಮಾತು
|

Updated on:Jun 09, 2024 | 4:10 PM

ಚಂದನ್ ಶೆಟ್ಟಿ (Chandan Shetty) ಹಾಗೂ ನಿವೇದಿತಾ ಗೌಡ (Niveditha Gowda) ವಿಚ್ಛೇದನ ಪಡೆದುಕೊಂಡಿದ್ದಾರೆ. ಈ ಇಬ್ಬರು ಒಟ್ಟಿಗೆ ‘ಕ್ಯಾಂಡಿ ಕ್ರಶ್’ ಹೆಸರಿನ ಸಿನಿಮಾದಲ್ಲಿ ನಾಯಕ-ನಾಯಕಿಯಾಗಿ ನಟಿಸುತ್ತಿದ್ದಾರೆ. ಸಿನಿಮಾದಲ್ಲಿಯೂ ಇವರಿಬ್ಬರದ್ದು ಪತಿ-ಪತ್ನಿ ಪಾತ್ರ. ಸಿನಿಮಾದ ಚಿತ್ರೀಕರಣ ಇನ್ನೂ ಚಾಲ್ತಿಯಲ್ಲಿದೆ. ಸಿನಿಮಾದ ನಿರ್ದೇಶಕರು ಹೇಳಿರುವಂತೆ ಇನ್ನೂ ಸುಮಾರು ಒಂದು ವಾರದ ಚಿತ್ರೀಕರಣ ಇಬ್ಬರದ್ದೂ ಬಾಕಿಯಿದೆ. ಇಬ್ಬರೂ ಒಟ್ಟಾಗಿಯೇ ಸಿನಿಮಾದಲ್ಲಿ ನಟಿಸಬೇಕಿದೆ. ಸಿನಿಮಾ ಸೆಟ್​ನಲ್ಲಿ ಈ ಜೋಡಿ ಹೇಗಿರುತ್ತಿತ್ತು, ವಿಚ್ಛೇದನದ ಕುರುಹುಗಳೇನಾದರೂ ಚಿತ್ರತಂಡಕ್ಕೆ ಸಿಕ್ಕಿತ್ತಾ ಎಂಬ ಬಗ್ಗೆ ‘ಕ್ಯಾಂಡಿಕ್ರಶ್’ ಸಿನಿಮಾದ ನಿರ್ದೇಶಕ ಪುನೀತ್ ಟಿವಿ9 ಕನ್ನಡದ ಜೊತೆಗೆ ಮಾತನಾಡಿದ್ದು, ಸೆಟ್​ನಲ್ಲಿ ಪರಸ್ಪರರ ಬಗ್ಗೆ ಬಹಳ ಕೇರಿಂಗ್ ಆಗಿ ಇಬ್ಬರೂ ಇರುತ್ತಿದ್ದರು. ಜಾಲಿಯಾಗಿ ಇರುತ್ತಿದ್ದರು. ವಿಚ್ಛೇದನ ಪಡೆದುಕೊಳ್ಳಲಿದ್ದಾರೆ ಎಂಬ ಅನುಮಾನ ಸಹ ಯಾರಿಗೂ ಬಂದಿರಲಿಲ್ಲ. ಅದಕ್ಕೆ ಆಸ್ಪದವೂ ಇರಲಿಲ್ಲ’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:09 pm, Sun, 9 June 24

Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ