DK brothers: ಬೇಸರ ಹಾಗೂ ವಿಷಾದದ ಮುಖಭಾವದೊಂದಿಗೆ ರಾಹುಲ್ ಗಾಂಧಿ ಮನೆಯಿಂದ ಹೊರಬಿದ್ದ ಡಿಕೆ ಸಹೋದರರು

ಅರುಣ್​ ಕುಮಾರ್​ ಬೆಳ್ಳಿ

Updated on: May 17, 2023 | 2:57 PM

ಮುಖ್ಯಮಂತ್ರಿ ಯಾರೆನ್ನುವ ಬಗ್ಗೆ ಇನ್ನೂ ಅಧಿಕೃತ ಘೋಷಣೆಯಾಗಿಲ್ಲವಾದರೂ ಮೂಲಗಳ ಪ್ರಕಾರ ಹೈಕಮಾಂಡ್ ಸಿದ್ದರಾಮಯ್ಯ ಪರ ಒಲವು ವ್ಯಕ್ತಪಡಿಸಿದೆ.

ದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಮತ್ತು ಅವರ ಸಹೋದರ ಡಿಕೆ ಸುರೇಶ್ (DK Suresh) ತುಂಬಾ ಬೇಸರಗೊಂಡಿದ್ದಾರೆ. ರಾಹುಲ್ ಗಾಂಧಿಯೊಂದಿಗೆ (Rahul Gandhi) ಅವರ ನಿವಾಸದಲ್ಲಿ ಚರ್ಚೆ ನಡೆಸಿ ಹೊರಬಿದ್ದಾಗ ಅವರಿಬ್ಬರ ಮುಖದಲ್ಲಿ ನಿರಾಶೆ ಮಡುಗಟ್ಟಿದ್ದು ಸ್ಪಷ್ಟವಾಗಿ ಗೋಚರಿಸುತಿತ್ತು. ಅವರು ಯಾರೊಂದಿಗೂ ಮಾತಾಡುವ ಮನಸ್ಥಿತಿಯಲ್ಲಿರಲಿಲ್ಲ. ಡಿಕೆ ಸಹೋದರರು ಅಲ್ಲಿಂದ ನೇರವಾಗಿ ತೆರಳಿದ್ದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಅವರ ನಿವಾಸಕ್ಕೆ. ಮುಖ್ಯಮಂತ್ರಿ ಯಾರೆನ್ನುವ ಬಗ್ಗೆ ಇನ್ನೂ ಅಧಿಕೃತ ಘೋಷಣೆಯಾಗಿಲ್ಲವಾದರೂ ಮೂಲಗಳ ಪ್ರಕಾರ ಹೈಕಮಾಂಡ್ ಸಿದ್ದರಾಮಯ್ಯ ಪರ ಒಲವು ವ್ಯಕ್ತಪಡಿಸಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.