AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿ ಗಣತಿ ವರದಿ ಮೇಲಿನ ಚರ್ಚೆ ಅಪೂರ್ಣ, ಮುಂದಿನ ಸಭೆಯಲ್ಲಿ ತೀರ್ಮಾನ: ಕೆಎನ್ ರಾಜಣ್ಣ

ಜಾತಿ ಗಣತಿ ವರದಿ ಮೇಲಿನ ಚರ್ಚೆ ಅಪೂರ್ಣ, ಮುಂದಿನ ಸಭೆಯಲ್ಲಿ ತೀರ್ಮಾನ: ಕೆಎನ್ ರಾಜಣ್ಣ

ಅರುಣ್​ ಕುಮಾರ್​ ಬೆಳ್ಳಿ
|

Updated on: Apr 18, 2025 | 10:23 AM

ವರದಿಯ ಬಗ್ಗೆ ಯಾವುದೇ ಸಚಿವ ವಿರೋಧ ವ್ಯಕ್ತಪಡಿಸಿಲ್ಲ, ಅವರಿಗೆ ಇರುವ ಸಂದೇಹಗಳನ್ನು ಸಭೆಯಲ್ಲಿ ವ್ಯಕ್ತಪಡಿಸಿದ್ದಾರೆ, ಬೇರೆ ಕೆಲವರು ಮತ್ತಷ್ಟು ವಿವರಗಳನ್ನು ಕೇಳಿದ್ದಾರೆ, ವರದಿಯನ್ನು ಅರ್ಥಮಾಡಿಕೊಳ್ಳಲು ಮತ್ತಷ್ಟು ಕಾಲಾವಕಾಶ ಬೇಕು ಅಂತ ಅವರು ಹೇಳಿದ್ದಾರೆ, ಸರಳವಾಗಿ ಹೇಳಬೇಕೆಂದರೆ ಸಭೆಯಲ್ಲಿ ಚರ್ಚೆ ಅಪೂರ್ಣವಾಗಿದೆ ಎಂದು ಸಚಿವ ರಾಜಣ್ಣ ಹೇಳಿದರು

ಬೆಂಗಳೂರು, ಏಪ್ರಿಲ್ 18: ಗುರುವಾರದಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಕುರಿತು ನಡೆದಿರುವ ಚರ್ಚೆ ಅಪೂರ್ಣವಾಗಿದೆ ಎಂದು ಸಹಕಾರ ಸಚಿವ ಕೆಎನ್ ರಾಜಣ್ಣ ಹೇಳಿದ್ದಾರೆ. ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತಾಡಿರುವ ಅವರು, ವರದಿಯ ಬಗ್ಗೆ ವಿಸ್ತೃವಾದ ಚರ್ಚೆ ನಡೆದಿದೆ, ಸಚಿವರೆಲ್ಲ ತಮ್ಮ ತಮ್ಮ ಅಭಿಪ್ರಾಯಗಳನ್ನು ಹೇಳಿದ್ದಾರೆ, ಕೆಲ ಸಚಿವರಿಗೆ ಎಲ್ಲ ವಿವರಗಳನ್ನು ಕೊಡುವುದು ಸಾಧ್ಯವಾಗಿಲ್ಲ, ಕೆಲವರಲ್ಲಿ ವರದಿಯ ಬಗ್ಗೆ ಗೊಂದಲಗಳಿವೆ, ಅವುಗಳನ್ನೆಲ್ಲ ನಿವಾರಿಸಿ ಮುಂದಿನ ಸಂಪುಟ ಸಭೆಯಲ್ಲಿ ಒಂದು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಇದನ್ನೂ ಓದಿ:  ಜಾತಿ ಗಣತಿ ವರದಿ ಜ್ವಾಲೆ: ಲಿಂಗಾಯತ ಸಚಿವರ ಸಭೆಯಲ್ಲಿ ಮಹತ್ವದ ನಿರ್ಣಯ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ