Video: ಬೆಂಗಳೂರು, ನಾಗಸಂದ್ರದಿಂದ ಪೀಣ್ಯ ಇಂಡಸ್ಟ್ರಿ ಮಧ್ಯೆ ಮೆಟ್ರೋ ಇಲ್ಲದೆ ಪ್ರಯಾಣಿಕರ ಪರದಾಟ

ಸಿಗ್ನಲಿಂಗ್ ಟೆಸ್ಟ್ ಕಾರಣ ಪೀಣ್ಯ ಇಂಡಸ್ಟ್ರಿ ಮತ್ತು ನಾಗಸಂದ್ರ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆ ಸ್ಥಗಿತಗೊಂಡಿದೆ. ಹೀಗಾಗಿ ಮಾಹಿತಿ ಕೊರತೆಯಿಂದ ನಿಲ್ದಾಣಕ್ಕೆ ಬಂದ ಪ್ರಯಾಣಿಕರು ಪರದಾಡುವಂತಾಯಿತು. ಈ ನಿಲ್ದಾಣಗಳ ನಡುವೆ ಯಾವಗಲೆಲ್ಲ ಮೆಟ್ರೋ ಸೇವೆ ಸ್ಥಗಿತವಾಗಲಿದೆ ಎಂಬ ಮಾಹಿತಿ ಇಲ್ಲಿದೆ.

Video: ಬೆಂಗಳೂರು, ನಾಗಸಂದ್ರದಿಂದ ಪೀಣ್ಯ ಇಂಡಸ್ಟ್ರಿ ಮಧ್ಯೆ ಮೆಟ್ರೋ ಇಲ್ಲದೆ ಪ್ರಯಾಣಿಕರ ಪರದಾಟ
| Updated By: ಗಣಪತಿ ಶರ್ಮ

Updated on:Aug 23, 2024 | 9:35 AM

ಬೆಂಗಳೂರು, ಆಗಸ್ಟ್​ 23: ನಾಗಸಂದ್ರದಿಂದ ಮಾದಾವರ ವಿಸ್ತೃತ ಮಾರ್ಗದಲ್ಲಿ ಸಿಗ್ನಲಿಂಗ್ ಟೆಸ್ಟ್ ನಡೆಯುತ್ತಿರುವ ಕಾರಣ ನಮ್ಮ ಮೆಟ್ರೋ ಹಸಿರು ಮಾರ್ಗದ 3 ನಿಲ್ದಾಣಗಳಲ್ಲಿ ಮೆಟ್ರೋ ಸಂಚಾರ ಸ್ಥಗಿತಹೊಂಡಿದೆ. ನಾಗಸಂದ್ರದಿಂದ ಪೀಣ್ಯ ಇಂಡಸ್ಟ್ರಿ ಮಧ್ಯೆ ಸಂಚಾರ ಸ್ಥಗಿತವಾಗಿದೆ. ಹೀಗಾಗಿ ಅನೇಕ ಪ್ರಯಾಣಿಕರು ಮೆಟ್ರೋ ಸ್ಟೇಷನ್​ಗೆ ಬಂದು ವಾಪಸ್​ ಹೋಗುತ್ತಿದ್ದಾರೆ. ಯಾವುದೇ ಮಾಹಿತಿ ಇಲ್ಲದ ಕಾರಣ ಅನೇಕ ಪ್ರಯಾಣಿಕರು ಸ್ಟೇಷನ್​ಗೆ ಬಂದು ವಾಪಸ್ ಹೋಗುತ್ತಿದ್ದಾರೆ.

ಸದ್ಯ ಪ್ರಯಾಣಿಕರು ಆಟೋ, ಕ್ಯಾಬ್​ಗಳ ಮೊರೆ ಹೋಗುತ್ತಿದ್ದು, ನಾಗಸಂದ್ರ ಟು ಪೀಣ್ಯ ಇಂಡಸ್ಟ್ರಿಗೆ ಆಟೋ ಚಾಲಕರು 50 ರೂ. ಕೇಳುತ್ತಿದ್ದಾರೆ.

ಪ್ರಯಾಣಿಕರೇ ಗಮನಿಸಿ

ಮೆಟ್ರೋ ಸಂಚಾರ ಸ್ಥಗಿತದ ಬಗ್ಗೆ ಬಿಎಂಆರ್​ಸಿಎಲ್ ಮಾಧ್ಯಮ ಪ್ರಕಟಣೆ ಹೊರಡಿಸಿತ್ತು. ಪೀಣ್ಯ ಇಂಡಸ್ಟ್ರಿ ಮತ್ತು ನಾಗಸಂದ್ರ ಮೆಟ್ರೋ ನಿಲ್ದಾಣಗಳ ನಡುವೆ ಆಗಸ್ಟ್ 20, 23 ಮತ್ತು 30 ಹಾಗೂ ಸೆಪ್ಟೆಂಬರ್ 6 ಮತ್ತು 11 ರಂದು ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತದೆ ಎಂದು ಬಿಎಂಆರ್​ಸಿಎಲ್ ತಿಳಿಸಿತ್ತು.

ಇದನ್ನೂ ಓದಿ: ನಮ್ಮ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ: ಈ ದಿನಗಳಂದು ಸಂಪೂರ್ಣ ಸ್ಥಗಿತ

ಬಿಎಂಆರ್​ಸಿಎಲ್​ನಿಂದ ಬಸ್ ವ್ಯವಸ್ಥೆ

ಆಟೋ ಚಾಲಕರು ದುಪ್ಪಟ್ಟು ದರ ವಸೂಲಿಗೆ ಮುಂದಾದ ಬೆನ್ನಲ್ಲೇ ಮೆಟ್ರೋ ಪ್ರಯಾಣಿಕರಿಗಾಗಿ ಬಿಎಂಟಿಸಿ ಬಸ್ಸುಗಳ ವ್ಯವಸ್ಥೆ ಮಾಡಲಾಗುತ್ತಿದೆ. ಬಿಎಂಆರ್​ಸಿಎಲ್ ಹತ್ತು ಮೆಟ್ರೋ ಫೀಡರ್ ಬಸ್​​ಗಳ ವ್ಯವಸ್ಥೆ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:25 am, Fri, 23 August 24

Follow us
ಕೆಲವು ಅನುಮಾನವಿತ್ತು, ಕೇಳಿದ್ದೇನೆ: ದರ್ಶನ್ ಭೇಟಿ ಬಳಿಕ ಲಾಯರ್ ಮಾತು
ಕೆಲವು ಅನುಮಾನವಿತ್ತು, ಕೇಳಿದ್ದೇನೆ: ದರ್ಶನ್ ಭೇಟಿ ಬಳಿಕ ಲಾಯರ್ ಮಾತು
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ