Chikmagalur: ಮೂಡಿಗೆರೆಯಲ್ಲಿ ಎಮ್ ಪಿ ಕುಮಾರಸ್ವಾಮಿ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ, ಮಾಜಿ ಶಾಸಕನಿಗೆ ತ್ರಿಶಂಕು ಸ್ಥಿತಿ!

ಅರುಣ್​ ಕುಮಾರ್​ ಬೆಳ್ಳಿ

Updated on: Mar 16, 2023 | 10:17 AM

ಕಾರ್ಯಕರ್ತರ ತಮ್ಮೊಂದಿಗಿಲ್ಲ ಅನ್ನೋದನ್ನು ಅರ್ಥಮಾಡಿಕೊಂಡಿರುವ ಕುಮಾರಸ್ವಾಮಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಕದ ತಟ್ಟಿದ್ದಾರೆ. ಆದರೆ ಅವೆರಡೂ ಪಕ್ಷದ ನಾಯಕರು ಅವರಿಗೆ ಕ್ಯಾರೆ ಅಂದಿಲ್ಲ.

ಚಿಕ್ಕಮಗಳೂರು: ಜಲ್ಲೆಯ ಮೂಡಿಗೆರೆ (Mudigere) ತಾಲ್ಲೂಕು ಬಿಜೆಪಿ ಘಟಕದಲ್ಲಿ ಒಡಕುಂಟಾಗಿರುವ ಬಗ್ಗೆ ನಾವು ಬಹಳ ಹಿಂದೆಯೇ ವರದಿ ಮಾಡಿದ್ದೆವು. ಅದೀಗ ಬಹಿರಂಗಗೊಳ್ಳುತ್ತಿದೆ. ಮಾಜಿ ಶಾಸಕ ಎಮ್ ಪಿ ಕುಮಾರಸ್ವಾಮಿ (MP Kumaraswamy) ಸ್ಥಳದ ಕಾರ್ಯಕರ್ತರಿಗೆ ಬೇಡದ ವ್ಯಕ್ತಿಯಾಗಿದ್ದಾರೆ. ಅವರಿಂದ ಕಾರ್ಯಕರ್ತರು ಎಷ್ಟು ಬೇಸತ್ತಿದ್ದಾರೆಂದರೆ, ವಿಜಯ ಸಂಕಲ್ಪ ಯಾತ್ರೆ ಭಾಗವಾಗಿ ಜಿಲ್ಲೆಗೆ ಆಗಮಿಸಲಿರುವ ಬಿಎಸ್ ಯಡಿಯೂರಪ್ಪನವರಿಗೆ (BS Yediyurappa) ಕುಮಾರಸ್ವಾಮಿಗೆ ಮೂಡಿಗೆರೆಯಿಂದ ಟಿಕೆಟ್ ನೀಡಕೂಡದೆಂದು ಮನವಿ ಸಲ್ಲಿಸಿದ್ದಾರೆ. ಕಾರ್ಯಕರ್ತರ ತಮ್ಮೊಂದಿಗಿಲ್ಲ ಅನ್ನೋದನ್ನು ಅರ್ಥಮಾಡಿಕೊಂಡಿರುವ ಕುಮಾರಸ್ವಾಮಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಕದ ತಟ್ಟಿದ್ದಾರೆ. ಆದರೆ ಅವೆರಡೂ ಪಕ್ಷದ ನಾಯಕರು ಅವರಿಗೆ ಕ್ಯಾರೆ ಅಂದಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 16, 2023 10:17 AM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.