ಮುಳುಗು ತಜ್ಞರ ಯಶಸ್ವೀ ಕಾರ್ಯಾಚರಣೆ, ಮಾಲವಿ ಜಲಾಶಯದಿಂದ ನೀರು ಸೋರಿಕೆ ಬಂದ್

ಎರಡು ಟಿಎಂಸಿ ಸಾಮರ್ಥ್ಯದ ಮಾಲವಿ ಡ್ಯಾಂನಿಂದ ನೀರು ಸೋರಿಕೆಯನ್ನು ತಡೆಗಟ್ಟಲು ಮುಳುಗು ತಜ್ಞರಿಂದ ಯಶಸ್ವೀ ಕಾರ್ಯಾಚರಣೆ ನಡೆಸಿದ ಬಗ್ಗೆ ಹಗರಿಬೊಮ್ಮನಹಳ್ಳಿಯ ಬಿಜೆಪಿ ಶಾಸಕ ನೇಮಿರಾಜ್ ನಾಯ್ಕ್ ಪತ್ರಿಕಾ ಗೋಷ್ಠಿ ನಡೆಸಿ ತಿಳಿಸಿದ್ದಾರೆ. ಇದು ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಆಗಿರುವ ಪ್ರಮಾದ ಎಂದು ಅವರು ಹೇಳುತ್ತಾರೆ.

ಬಳ್ಳಾರಿ: ಕಲ್ಯಾಣ ಕರ್ನಾಟಕ ಭಾಗದ ಜಲಾಶಯಗಳ ನಸೀಬು ಸರಿ ಇದ್ದಂತಿಲ್ಲ. ಮೊದಲಿಗೆ ಕೊಪ್ಪಳ ಜಿಲ್ಲೆ ಮುನಿರಾಬಾದ್ ಬಳಿಯಿರುವ ಟಿಬಿ ಡ್ಯಾಂನ ಕ್ರಸ್ಟ್ ಗೇಟ್​ವೊಂದು ಕೊಚ್ಚಿಕೊಂಡು ಹೋಗಿದ್ದರಿಂದ ಮತ್ತೊಂದು ಗೇಟನ್ನು ಅಳವಡಿಸಲಾಯಿತು. ಈಗ ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿಯಲ್ಲಿರುವ ಮಾಲವಿ ಡ್ಯಾಂನಿಂದ ನೀರು ಸೋರಿಕೆಯಾಗಿ ಹೆಚ್ಚಿನ ಪ್ರಮಾಣದಲ್ಲಿ ನೀರು ಪೋಲಾಗುವುದು ಶುರುವಾಗಿತ್ತು. ಆದರೆ ಮುಳುಗು ತಜ್ಞರ ನೆರವಿನಿಂದ ಸೋರಿಕೆಯನ್ನು ತಡೆಗಟ್ಟಲಾಗಿದೆ ಎಂದು ನಮ್ಮ ವರದಿಗಾರ ಮಾಹಿತಿ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಟಿಬಿ ಡ್ಯಾಂ ಗೇಟ್​ ದುರಸ್ತಿ ಕಾರ್ಯ ಯಶಸ್ವಿ: ಸಿಬ್ಬಂದಿಗಳಿಗೆ ಧನ್ಯವಾದ ತಿಳಿಸಿದ ಡಿಕೆ ಶಿವಕುಮಾರ್

Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Follow Us