AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಸ್ ಯಡಿಯೂರಪ್ಪ ಮತ್ತು ಡಿಕೆ ಶಿವಕುಮಾರ್ ಮಾತು ವಿ ಸೋಮಣ್ಣ ಕಾಂಗ್ರೆಸ್ ಸೇರುವ ಸಮಯ ಸನ್ನಿಹಿತವಾಗಿರುವುದನ್ನು ಸೂಚಿಸುತ್ತದೆಯೇ?

ಬಿಎಸ್ ಯಡಿಯೂರಪ್ಪ ಮತ್ತು ಡಿಕೆ ಶಿವಕುಮಾರ್ ಮಾತು ವಿ ಸೋಮಣ್ಣ ಕಾಂಗ್ರೆಸ್ ಸೇರುವ ಸಮಯ ಸನ್ನಿಹಿತವಾಗಿರುವುದನ್ನು ಸೂಚಿಸುತ್ತದೆಯೇ?

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Mar 10, 2023 | 12:19 PM

Share

ಯಡಿಯೂರಪ್ಪನವರು ಹೇಳಿದ್ದು ಸರಿಯಿದೆ, ಹೋಗೋರನ್ನು ತಡೆಯಯಲಾಗಲ್ಲ ಅನ್ನೋದು ನಿಜ, ಅವರು ಯಾರ್ಯಾರನ್ನು ಕಳಿಸುತ್ತಾರೋ ಕಳಿಸಲಿ, ನಾವು ಅವರ ಬಗ್ಗೆ ಯೋಚನೆ ಮಾಡ್ತೀವಿ,’ ಅಂತ ಶಿವಕುಮಾರ್ ಹೇಳಿದರು.

ಬೆಂಗಳೂರು: ವಸತಿ ಖಾತೆ ಸಚಿವ ವಿ ಸೋಮಣ್ಣ (V Somanna) ಅವರು ಬಿಜೆಪಿ ತೊರೆಯುವ ಕಾಲ ಹತ್ತಿರವಾಗುತ್ತಿದೆಯೇ? ನಿನ್ನೆ ಸೋಮಣ್ಣ ಹಾಗೂ ಕೆಸಿ ನಾರಾಯಣಗೌಡ ಜೊತೆ ಮಾತಾಡುವುದಾಗಿ ಹೇಳಿದ್ದ ಬಿಎಸ್ ಯಡಿಯೂರಪ್ಪನವರು (BS Yediyurappa) ಇವತ್ತು ಹೋಗೋರನ್ನ ನಿಲ್ಲಿಸಕ್ಕಾಗಲ್ಲ ಅಂತ ಹೇಳಿದ್ದಾರೆ. ನಗರದಲ್ಲಿದು ಈ ಸಂಗತಿಯನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರ ಮುಂದೆ ಸುದ್ದಿಗಾರರು ಪ್ರಸ್ತಾಪಿಸಿದಾಗ, ‘ಯಡಿಯೂರಪ್ಪನವರು ಹೇಳಿದ್ದು ಸರಿಯಿದೆ, ಹೋಗೋರನ್ನು ತಡೆಯಯಲಾಗಲ್ಲ ಅನ್ನೋದು ನಿಜ, ಅವರು ಯಾರ್ಯಾರನ್ನು ಕಳಿಸುತ್ತಾರೋ ಕಳಿಸಲಿ, ನಾವು ಅವರ ಬಗ್ಗೆ ಯೋಚನೆ ಮಾಡ್ತೀವಿ,’ ಅಂತ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published on: Mar 09, 2023 02:06 PM

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.