Karnataka Assembly Polls: ಡಿಕೆ ಶಿವಕುಮಾರ್ ಮತ್ತು ಟಿವಿ9 ಸಿಬ್ಬಂದಿ ಪಯಣಿಸುತ್ತಿದ್ದ ಹೆಲಿಕಾಪ್ಟರ್​ಗೆ ಅಪ್ಪಳಿಸಿದ ರಣಹದ್ದು, ಎಲ್ಲರೂ ಅಪಾಯದಿಂದ ಪಾರು

Updated on: May 02, 2023 | 2:10 PM

ಹಕ್ಕಿ ಚಾಪರ್ ಗೆ ಬಡಿದಾಕ್ಷಣ ಅದನ್ನು ವಾಪಸ್ಸು ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ವಾಪಸ್ಸು ತರಲಾಗಿದೆ.

ಬೆಂಗಳೂರು: ಹೆಚ್ ಎ ಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರೊಂದರಲ್ಲಿ ಮುಳುಬಾಗಿಲುಗೆ ಪಯಣಿಸುತ್ತಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಮತ್ತು ಟಿವಿ9 ಕನ್ನಡ ವಾಹಿನಿ ವರದಿಗಾರ (reporter) ಹಾಗೂ ಕೆಮೆರಾಮನ್ (cameraman) ಅಪಾಯದಿಂದ ಪಾರಾಗಿದ್ದಾರೆ. ಅಸಲಿಗೆ ನಡೆದ ಸಂಗತಿಯೇನೆಂದರೆ ಇವರು ಪ್ರಯಾಣಿಸುತ್ತಿದ್ದ ಚಾಪರ್ ಗೆ ಒಂದು ರಣಹದ್ದು ಬಂದು ಅಪ್ಪಳಿಸಿದೆ. ಅದು ಅಪ್ಪಳಿಸಿದ ರಭಸಕ್ಕೆ ಹೆಲಿಕಾಪ್ಟರ್ ಗಾಜು ಒಡೆದು ಪುಡಿಯಾಗಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಹಕ್ಕಿ ಚಾಪರ್ ಗೆ ಬಡಿದಾಕ್ಷಣ ಅದನ್ನು ವಾಪಸ್ಸು ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ವಾಪಸ್ಸು ತರಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More