ರಾಮನಗರ ಜಿಲ್ಲೆಗೆ ಹೊಸ 100 ಅಶ್ವಮೇಧ ಬಸ್ ಬಿಡುಗಡೆಯಾಗಿರುವ ಘೋಷಣೆ ಮಾಡಿದ ಡಿಕೆ ಶಿವಕುಮಾರ್
ರಾಮನಗರವನ್ನು ಮಾದರಿ ಜಿಲ್ಲೆಯನ್ನಾಗಿ ಪರಿವರ್ತಿಸುವ ಬಗ್ಗೆ ಮಾತಾಡಿದ ಡಿಸಿಎಂ, ಅಂಕಿ-ಅಂಶಗಳ ಮೂಲಕ ಎಲ್ಲವನ್ನು ಜನರ ಮುಂದಿಡುತ್ತೇವೆ, ರಾಮನಗರ, ಕನಕಪುರ, ಹಾರೋಹಳ್ಳಿ ಮತ್ತು ಚನ್ನಪಟ್ಟಣ-ಎಲ್ಲ ತಾಲ್ಲೂಕುಗಳಲ್ಲಿ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸಲಾಗುವುದು ಎಂದು ಹೇಳಿದರು.
ರಾಮನಗರ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಇಂದು ರಾಮನಗರಕ್ಕೆ (Ramanagara) ಒಂದು ಕೊಡುಗೆಯನ್ನು ಘೋಷಿಸಿದರು. ಶಿವಕುಮಾರ್ ದಶಕಗಳಿಂದ ಬೆಂಗಳೂರುನಲ್ಲಿ ನೆಲೆಸಿರುವುದು ನಿಜವಾದರೂ ರಾಮನಗರ ಅವರ ತವರು ಜಿಲ್ಲೆ ಅನ್ನೋದು ಗೊತ್ತಿರುವ ವಿಚಾರವೇ. ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ವತಿಯಿಂದ ಜಿಲ್ಲೆಗೆ 100 ಹೊಚ್ಚಹೊಸ ಅಶ್ವಮೇಧ ಬಸ್ ಗಳನ್ನು (Ashvamedha bus) ಬಿಡುಗಡೆ ಮಾಡಿರುವ ಸಂಗತಿಯನ್ನು ಅವರು ಪತ್ರಕರ್ತರಿಗೆ ಹೇಳಿದರು. ಶಕ್ತಿ ಯೋಜನೆ ಜಾರಿಯಾದ ಬಳಿಕ ಬಸ್ ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಬಹಳ ಹೆಚ್ಚಾಗಿರುವುದರಿಂದ ಪ್ರಯಾಣಿಸುವುದು ಕಷ್ಟವಾಗುತ್ತಿದೆ ಎಂದು ಪುರುಷರು ಒಂದೇ ಸಮ ದೂರುತ್ತಿದ್ದ ಕಾರಣ 100 ಅಶ್ವಮೇಧ ಬಸ್ ಗಳನ್ನು ರಾಮನಗರ ಜಿಲ್ಲೆಗೆ ನೀಡಲಾಗಿದೆ ಎಂದು ಶಿವಕುಮಾರ್ ಹೇಳಿದರು. ರಾಮನಗರವನ್ನು ಮಾದರಿ ಜಿಲ್ಲೆಯನ್ನಾಗಿ ಪರಿವರ್ತಿಸುವ ಬಗ್ಗೆ ಮಾತಾಡಿದ ಡಿಸಿಎಂ, ಅಂಕಿ-ಅಂಶಗಳ ಮೂಲಕ ಎಲ್ಲವನ್ನು ಜನರ ಮುಂದಿಡುತ್ತೇವೆ, ರಾಮನಗರ, ಕನಕಪುರ, ಹಾರೋಹಳ್ಳಿ ಮತ್ತು ಚನ್ನಪಟ್ಟಣ-ಎಲ್ಲ ತಾಲ್ಲೂಕುಗಳಲ್ಲಿ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸಲಾಗುವುದು ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
