ಆರೆಸ್ಸೆಸ್ ಗೀತೆ ವಿಷಯದಲ್ಲಿ ಶಿವಕುಮಾರ್ ಕ್ಷಮೆ ಕೇಳಿದ್ದಾರೆ, ಅದು ಮುಗಿದುಹೋದ ಅಧ್ಯಾಯ: ಹೆಚ್​ಕೆ ಪಾಟೀಲ್

Updated on: Aug 27, 2025 | 5:16 PM

ಧರ್ಮಸ್ಥಳ ಶವಗಳನ್ನು ಹೂತಿಟ್ಟ ಪ್ರಕರಣದ ವಿಷಯದಲ್ಲಿ ಮಾತಾಡಿದ ಪಾಟೀಲ್, ಕಾಂಗ್ರೆಸ್ ನಾಯಕರೆಲ್ಲ ಮಂಜುನಾಥನ ಭಕ್ತರು, ಅಲ್ಲಿ ನಡೆದ ಬೆಳವಣಿಗೆಗಳಿಂದ ಎಲ್ಲ ಭಕ್ತರಿಗೆ ನೋವಾಗಿದೆ, ಅದರೆ ಸತ್ಯ ಹೊರಬಂದ ಕಾರಣ ಸಂತೋಷವೂ ಆಗಿದೆ, ವಿಷಯ ಅಲ್ಲಿಗೆ ಕೊನೆಗೊಳ್ಳಬೇಕು, ಆದರೆ ಇದರಲ್ಲಿ ರಾಜಕಾರಣ ಮಾಡಲು ಹೊರಟರೆ ಪಾಪಕ್ಕೆ ಗುರಿಯಾಗಬೇಕಾದೀತು ಎಂಬ ಎಚ್ಚರಿಕೆ ಕೊಡಬಯಸುತ್ತೇನೆ ಎಂದರು.

ದೆಹಲಿ, ಆಗಸ್ಟ್, 27: ಸಭೆಯೊಂದರಲ್ಲಿ ಪಾಲ್ಗೊಳ್ಳಲು ದೆಹಲಿಗೆ ಹೋಗಿರುವ ಕಾನೂನು ಸಚಿವ ಹೆಚ್ ಕೆ ಪಾಟೀಲ್ (HK Patil) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುತ್ತಾ, ಡಿಕೆ ಶಿವಕುಮಾರ್ (DK Shivakumar) ಸದನದಲ್ಲಿ ಆರೆಸ್ಸೆಸ್ ಪ್ರಾರ್ಥನಾ ಗೀತೆಯನ್ನು ಹಾಡಿ ವಿವಾದ ಸೃಷ್ಟಿಸಿದ್ದು, ನಂತರ ಅದರ ಬಗ್ಗೆ ವಿವರಣೆ ನೀಡಿ ಕ್ಷಮಾಪಣೆ ಕೇಳಿದ್ದು ಈಗ ಮುಗಿದ್ದು ಹೋದ ಅಧ್ಯಾಯ, ಪಕ್ಷದ ಅಧ್ಯಕ್ಷರೇ ಅದೊಂದು ಮುಗಿದ ಅಧ್ಯಾಯ ಅಂತ ಹೇಳಿದ್ದಾರೆ, ಹಾಗಾಗಿ ಅದರ ಬಗ್ಗೆ ಮಾತಾಡೋದು ಸರಿಯಲ್ಲ ಎಂದರು. ಶಿವಕುಮಾರ್ ಕ್ಷಮೆ ಯಾಚಿಸಿದ ಹಾಗೆ ರಾಜಣ್ಣ ಕೂಡ ಮಾಡಿದರೆ ಅವರನ್ನು ಸಂಪುಟಕ್ಕೆ ವಾಪಸ್ಸು ಸೇರಿಸಿಕೊಳ್ಳುತ್ತೀರಾ ಅಂತ ಕೇಳಿದ ಪ್ರಶ್ನೆಗೆ ಉತ್ತರಿಸಲು ತಡವರಿಸಿದ ಪಾಟೀಲ್, ಬಿಜೆಪಿಯೊಂದಿಗೆ ಕೈ ಜೋಡಿಸಿರುವ ಕೆಲ ಮಾಧ್ಯಮಗಳು ಅಂಥ ಚರ್ಚೆಗಳನ್ನು ಹುಟ್ಟುಹಾಕುತ್ತಿವೆ, ಎರಡು ವಿಷಯಗಳ ನಡುವೆ ಥಳುಕು ಹಾಕುವುದು, ಚರ್ಚೆ ಮಾಡೋದು ಸರಿಯಲ್ಲ ಎಂದು ಹೇಳಿದರು.

ಇದನ್ನೂ ಓದಿ:  ಚಾಮುಂಡಿ ಬೆಟ್ಟ ಹಿಂದೂಗಳಿಗೆ ಮಾತ್ರ ಸೇರಿದ್ದಲ್ಲ ಎನ್ನುವ ಶಿವಕುಮಾರ್ ಕ್ಷಮೆ ಕೇಳಬೇಕು: ಶೋಭಾ ಕರಂದ್ಲಾಜೆ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More