ಮುಕೇಶ್ ಅಂಬಾನಿ ದಂಪತಿ ಪುತ್ರನ ಮದುವೆ ಸಮಾರಂಭ: ಡಿಕೆ ಶಿವಕುಮಾರ್​ ಭಾಗಿ

Updated on: Jul 13, 2024 | 11:03 PM

ಅನಂತ್​ ಅಂಬಾನಿ, ರಾಧಿಕ ವಿವಾಹಕ್ಕಾಗಿ ಸ್ವರ್ಗವೇ ನಾಚುವಂತಹ ಅದ್ಧೂರಿ ವೇದಿಕೆ ಸಿದ್ಧವಾಗಿದೆ. ಕುಬೇರನ ಪುತ್ರನ ಕಲ್ಯಾಣಕ್ಕೆ ಎಲ್ಲಾ ಕ್ಷೇತ್ರದ ಸ್ಟಾರ್​ಗಳು ಸಾಕ್ಷಿಯಾಗಿದ್ದು, ಎಲ್ಲೆಡೆ ಸಂಭ್ರಮ ಮನೆ ಮಾಡಿದೆ. ಡಿಸಿಎಂ ಡಿಕೆ ಶಿವಕುಮಾರ್ ಕೂಡ ಮದುವೆಯಲ್ಲಿ ಭಾಗಿ ಆಗಿದ್ದಾರೆ. ​

ಮುಂಬೈ, ಜುಲೈ 13: ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿ (Mukesh Ambani) ದಂಪತಿ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್​ ಮದುವೆ ಕಾರ್ಯಕ್ರಮ ಮುಂಬೈನ ವರ್ಲ್ಡ್​ ಜಿಯೋ ಸೆಂಟರ್​​ನಲ್ಲಿ ಅದ್ಧೂರಿಯಾಗಿ ನೆರವೇರುತ್ತಿದೆ. ಇಂದು ಶುಭ ಆಶೀರ್ವಾದ ಸಮಾರಂಭ ನಡೆದಿದ್ದು, ಡಿಸಿಎಂ ಡಿಕೆ ಶಿವಕುಮಾರ್ (DK Shivakumar)​ ಭಾಗಿ ಆಗಿದ್ದಾರೆ. ಸದ್ಯ ಡಿಕೆ ಶಿವಕುಮಾರ್​ ಭಾಗಿಯಾಗಿರುವ ಫೋಟೋಗಳು ವೈರಲ್ ಆಗಿವೆ. ಮುಕೇಶ್ ಅಂಬಾನಿ ದಂಪತಿ ಪುತ್ರನ ಮದುವೆಗೆ ಸಿಎಂ ಸಿದ್ದರಾಮಯ್ಯ ಆಹ್ವಾನ ನೀಡಲಾಗಿತ್ತು ಎಂದು ಈ ಹಿಂದು ಸುದ್ದಿ ಹರಿದಾಡಿತ್ತು. ಬಳಿಕ ಅಧಿಕೃತವಾಗಿ ಯಾವುದೇ ಆಹ್ವಾನ ಬಂದಿಲ್ಲ ಎಂದು ತಿಳಿಸಿದ್ದರು. ಮದುವೆಯಲ್ಲಿ ಸಾಕಷ್ಟು ರಾಜಕೀಯ ಗಣ್ಯಾತಿಗಣ್ಯರು ಭಾಗಿಯಾಗಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

Published on: Jul 13, 2024 11:03 PM
Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More