ಶಾಮನೂರು ಶಿವಶಂಕರಪ್ಪ ಯಾಕೆ ಹಾಗೆ ಹೇಳಿದ್ದಾರೋ ಗೊತ್ತಿಲ್ಲ, ಅವರೊಂದಿಗೆ ಚರ್ಚೆ ಮಾಡ್ತೀನಿ: ಡಿಕೆ ಶಿವಕುಮಾರ್
ಲಿಂಗಾಯತ ಸಮಯದಾಯಕ್ಕೆ ಸೇರಿದ ಶಾಸಕನಿಗೆ ಡಿಸಿಎಂ ಹುದ್ದೆ ಅಲ್ಲ, ಮುಖ್ಯಮಂತ್ರಿ ಹುದ್ದೆಯೇ ಬೇಕು ಮತ್ತು ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯವಾಗುತ್ತಿದೆ ಅಂತ ಶಾಮನೂರು ಹೇಳಿದ್ದನ್ನು ಶಿವಕುಮಾರ್ ಗೆ ಹೇಳಿದಾಗ ಏನಂತ ಗೊತ್ತಿಲ್ಲ, ಅವರೊಂದಿಗೆ ಮಾತಾಡ್ತೀನಿ, ಚೆಕ್ ಮಾಡಿ ಹೇಳ್ತೀನಿ ಅಂತಷ್ಟೇ ಹೇಳಿದರು.
ಬೆಂಗಳೂರು: ಸದ್ಯದ ಕಾಂಗ್ರೆಸ್ ನಾಯಕರ ಪೈಕಿ 93-ವರ್ಷ ವಯಸ್ಸಿನ ಶಾಮನೂರು ಶಿವಶಂಕರಪ್ಪನವರೇ (Shamanur Shivashankarappa) ಪ್ರಾಯಶಃ ಅತ್ಯಂತ ಹಿರಿಯ ನಾಯಕರಾಗಿರಬಹುದು. ಆದರೆ ಅವರು ಲಿಂಗಾಯತ ಸಮುದಾಯದ ಬಗ್ಗೆ ಧ್ವನಿ ಎತ್ತಿರೋದು ಪಕ್ಷದ ಪ್ರಮುಖ ನಾಯಕರಿಗೆ ಮುಜುಗುರ ಉಂಟುಮಾಡುತ್ತಿರುವಂತೆ ಭಾಸವಾಗುತ್ತಿದೆ. ಮಾಧ್ಯಮ ಪ್ರತಿನಿಧಿಗಳು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ (Siddaramaiah) ಕೇಳಿದ ಪ್ರಶ್ನೆಯನ್ನೇ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಕೇಳಿದರು. ಲಿಂಗಾಯತ ಸಮಯದಾಯಕ್ಕೆ ಸೇರಿದ ಶಾಸಕನಿಗೆ ಡಿಸಿಎಂ ಹುದ್ದೆ ಅಲ್ಲ, ಮುಖ್ಯಮಂತ್ರಿ ಹುದ್ದೆಯೇ ಬೇಕು ಮತ್ತು ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯವಾಗುತ್ತಿದೆ ಅಂತ ಶಾಮನೂರು ಹೇಳಿದ್ದನ್ನು ಶಿವಕುಮಾರ್ ಗೆ ಹೇಳಿದಾಗ ಏನಂತ ಗೊತ್ತಿಲ್ಲ, ಅವರೊಂದಿಗೆ ಮಾತಾಡ್ತೀನಿ, ಚೆಕ್ ಮಾಡಿ ಹೇಳ್ತೀನಿ ಅಂತಷ್ಟೇ ಅವರು ಹೇಳಿ ಹೊರಡಲನುವಾದರು. ಡಿಜೆ ಹಳ್ಳಿ ಪ್ರಕರಣದ ಬಗ್ಗೆ ಕೇಳಿದ ಪ್ರಶ್ನೆಗೆ ಅವರು, ಗೃಹ ಸಚಿವರು ಅದಕ್ಕೆ ಉತ್ತರಿಸುತ್ತಾರೆ ಅಂದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮುತ್ತೊಂದ ಕೊಡವೆ ಹತ್ತಿರ..ಹತ್ತಿರ.. ಬಾ: ವ್ಯಕ್ತಿಗೆ ಕಿಸ್ ಕೊಟ್ಟ ಜಮೀರ್!

ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಮೈಸೂರಿನ ಬಾಲಕಿ

ಮಿನಿಸ್ಟರ್ ಪಿಎ ಸರ್ಫ್ರಾಜ್ರನ್ನು ರೂಪೇಶ್ ಬ್ಲ್ಯಾಕ್ಮೇಲ್ ಮಾಡಿರುವ ಆರೋಪ

ಯಾವ ಇಲಾಖೆ ಮೇಲೂ ಸರ್ಕಾರಕ್ಕೆ ನಿಯಂತ್ರಣವಿಲ್ಲ, ಅದೇ ನೋವು: ರಾಜು ಕಾಗೆ
