Karnataka Assembly Polls: ಕಬ್ಬಾಳಮ್ಮ ದೇವಸ್ಥಾನದ ಹುಂಡಿಗೆ ಡಿಕೆ ಶಿವಕುಮಾರ್ ಕೈಗೆ ಸಿಕ್ಕಷ್ಟು ನೋಟುಗಳನ್ನು ಹಾಕಿದ್ದಷ್ಟೇ ಗೊತ್ತು, ಎಷ್ಟೂಂತ ಗೊತ್ತಿಲ್ಲ!

ಅರುಣ್​ ಕುಮಾರ್​ ಬೆಳ್ಳಿ

Updated on: Apr 17, 2023 | 5:17 PM

ಹುಂಡಿಗೆ ಹಣ ಹಾಕಿದ ಬಳಿಕವೂ ಅವರಲ್ಲಿ ನೋಟುಗಳ ಕಂತೆ ಉಳಿಯುತ್ತದೆ. ಅವುಗಳನ್ನು ನೀಟಾಗಿ ಜೋಡಿಸಿಕೊಂಡು, ರಬ್ಬರ್ ಬ್ಯಾಂಡ್ ಹಾಕಿ ಜೇಬಲ್ಲಿ ಇಟ್ಟುಕೊಳ್ಳುತ್ತಾ ಪ್ರಸಾದವನ್ನು ಬಾಯಿಗೆ ಹಾಕ್ಕೊಂಡು ಅಲ್ಲಿಂದ ತೆರಳುತ್ತಾರೆ.

ರಾಮನಗರ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಕನಕಪುರ ಕ್ಷೇತ್ರದ ಕಬ್ಬಾಲುನಲ್ಲಿರುವ ಕಬ್ಬಾಳಮ್ಮನ (Kabbalamma) ಪರಮ ಭಕ್ತರು ಅಂತ ಕನ್ನಡಿಗರಿಗೆಲ್ಲ ಗೊತ್ತಿರುವ ಸಂಗತಿಯೇ. ಸಂತಸದಲ್ಲಿರಲಿ, ಆಥವಾ ಕಷ್ಟ ಶಿವಕುಮಾರ್ ಕಬ್ಬಾಳಮ್ಮನಿಗೆ ಪೂಜೆ ಸಲ್ಲಿಸುತ್ತಾರೆ. ಇಂದು ಕನಕಪುರದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಮನಗರದಲ್ಲಿ ನಾಮಪತ್ರ ಸಲ್ಲಿಸುವ ಮೊದಲು ಶಿವಕುಮಾರ ಕುಟುಂಬ ಸಮೇತರಾಗಿ ಕನಕಪುರದ ಕೆಂಕೇರಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಕಬ್ಬಾಳಮ್ಮನ ಸನ್ನಿಧಿಗೆ ಹೋದರು. ಪೂಜೆ ಸಲ್ಲಿಸಿದ ಮೇಲೆ ಅವರು ದೇವಸ್ಥಾನದ ಹುಂಡಿಗೆ ಹಣ ಹಾಕಿದ ಪರಿಯನ್ನೊಮ್ಮೆ ನೋಡಿ. ಕೈಗೆ ಸಿಕ್ಕಷ್ಟು ರೂ. 500 ಮುಖಬೆಲೆಯ ಗರಿಗರಿ ನೋಟುಗಳನ್ನು ಹುಂಡಿಯಲ್ಲಿ ತುರುಕುತ್ತಾರೆ. ಎಷ್ಟ ಹಾಕಿದ್ದು ಅಂತ ಅವರಿಗೂ ಗೊತ್ತಿರಲಾರದು. ಹುಂಡಿಗೆ ಹಣ ಹಾಕಿದ ಬಳಿಕವೂ ಅವರಲ್ಲಿ ನೋಟುಗಳ ಕಂತೆ ಉಳಿಯುತ್ತದೆ. ಅವುಗಳನ್ನು ನೀಟಾಗಿ ಜೋಡಿಸಿಕೊಂಡು, ರಬ್ಬರ್ ಬ್ಯಾಂಡ್ ಹಾಕಿ ಜೇಬಲ್ಲಿ ಇಟ್ಟುಕೊಳ್ಳುತ್ತಾ ಪ್ರಸಾದವನ್ನು ಬಾಯಿಗೆ ಹಾಕ್ಕೊಂಡು ಅಲ್ಲಿಂದ ತೆರಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Apr 17, 2023 05:17 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.