AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆ ಶಿವಕುಮಾರ್​ ಎಸ್ಕಾರ್ಟ್​​ ವಾಹನ ಪಲ್ಟಿ

ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆ ಶಿವಕುಮಾರ್​ ಎಸ್ಕಾರ್ಟ್​​ ವಾಹನ ಪಲ್ಟಿ

ದಿಲೀಪ್​, ಚೌಡಹಳ್ಳಿ
| Edited By: ವಿವೇಕ ಬಿರಾದಾರ|

Updated on:Jul 19, 2025 | 3:50 PM

Share

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬೆಂಗಾವಲು ವಾಹನವು ಮೈಸೂರಿನಿಂದ ಬೆಂಗಳೂರಿಗೆ ಹೋಗುವಾಗ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಬಳಿ ಪಲ್ಟಿಯಾಗಿದೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಈ ಅಪಘಾತ ಸಂಭವಿಸಿದೆ. ವಾಹನದಲ್ಲಿದ್ದ ಇಬ್ಬರು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಮತ್ತು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಣಾಪಾಯದಿಂದ ಅವರು ಪಾರಾಗಿದ್ದಾರೆ.

ಮಂಡ್ಯ, ಜುಲೈ 19: ಮೈಸೂರಿನಲ್ಲಿ ನಡೆದ ಸಾಧನಾ ಸಮಾವೇಶ ಕಾರ್ಯಕ್ರಮ ಮುಗಿಸಿ ವಾಪಸ್​​ ಬೆಂಗಳೂರಿಗೆ ಬರುತ್ತಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar)​ ಅವರ ಬೆಂಗಾವಲು ವಾಹನ (Escort vehicle) ಪಲ್ಟಿಯಾಗಿದೆ. ವಾಹನದಲ್ಲಿದ್ದ ಇಬ್ಬರು ಸಿಬ್ಬಂದಿಗೆ ಸಣ್ಣಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ವ್ಯಾಪ್ತಿಯ ಗೌಡಹಳ್ಳಿ ಟಿಎಂ ಹೊಸೂರು ಬಳಿಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇಯಲ್ಲಿ ಘಟನೆ ನಡೆದಿದೆ. ಬೆಂಗಾವಲು ವಾಹನ ಡಿವೈಡರ್ ಡಿಕ್ಕಿಯಾಗಿ ಪಲ್ಟಿಯಾಗಿದೆ. ಬೆಂಗಾವಲು ವಾಹನದಲ್ಲಿದ್ದ ಇಬ್ಬರನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Published on: Jul 19, 2025 03:35 PM

Follow Us
Dileep CP
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More