ಕಿಡ್ನ್ಯಾಪ್ ಕೇಸ್ನಲ್ಲಿ ಹೆಚ್ಡಿ ರೇವಣ್ಣ ಬಂಧನ; ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ
ಮಹಿಳೆ ಕಿಡ್ನ್ಯಾಪ್ ಕೇಸ್ನಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ(H.D. Revanna) ಬಂಧನಕ್ಕೆ ಸಂಬಂಧಿಸಿದಂತೆ ಗದಗ ನಗರದಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್(DK Shivakumar), ‘ನ್ಯಾಯಾಲಯ ಉಂಟು, ಕಾನೂನು ಉಂಟು. ನಾವು ಯಾವುದಕ್ಕೂ ಭಾಗಿಯಾಗಲ್ಲ, ನಮಗೆ ಅವಶ್ಯಕತೆಯೂ ಇಲ್ಲ ಎಂದಿದ್ದಾರೆ.
ಗದಗ, ಮೇ.04: ಮಹಿಳೆ ಕಿಡ್ನ್ಯಾಪ್ ಕೇಸ್ನಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ(H.D. Revanna) ಬಂಧನಕ್ಕೆ ಸಂಬಂಧಿಸಿದಂತೆ ‘ನ್ಯಾಯಾಲಯ ಉಂಟು, ಕಾನೂನು ಉಂಟು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್(DK Shivakumar) ಹೇಳಿದರು. ಗದಗ ನಗರದಲ್ಲಿ ಮಾತನಾಡಿದ ಅವರು, ‘ನಾವು ಯಾವುದಕ್ಕೂ ಭಾಗಿಯಾಗಲ್ಲ, ನಮಗೆ ಅವಶ್ಯಕತೆಯೂ ಇಲ್ಲ. ಕೋರ್ಟ್, ಕಾನೂನು ಮೂಲಕ ಏನಾದರೂ ರಕ್ಷಣೆ ಪಡೆದುಕೊಳ್ಳಲಿ. ಅವರು ಏನಾದರೂ ಮಾಡಿಕೊಳ್ಳಲಿ. ಕುಮಾರಣ್ಣ ಏನೋ ಹೇಳಿದ್ದಾರೆ, ಹಾಗೇ ಆಗುತ್ತದೆ ಎಂದು ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂಬ ಕುಮಾರಸ್ವಾಮಿ ಹೇಳಿಕೆಯನ್ನು ನೆನಪಿಸಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos

