ಡಿಕೆ ಶಿವಕುಮಾರ್ ತುಂಡು ಜಮೀನಿಗಾಗಿ 9-ವರ್ಷದ ಬಾಲಕಿಯನ್ನು ಅಪಹರಿಸಿದ್ದರು: ಹೆಚ್ ಡಿ ದೇವೇಗೌಡ

Updated on: Apr 17, 2024 | 2:20 PM

ನಂತರ ಅ ನಿರ್ದಿಷ್ಟ ಜಮೀನನ್ನು ಪಡೆಯಲೇ ಬೇಕೆಂದು ಹಟಕ್ಕೆ ಬೀಳುವ ಶಿವಕಮಾರ್ ಅ ವ್ಯಕ್ತಿಯ 9-ವರ್ಷದ ಮಗಳನ್ನು ಅಪಹರಿಸಿ ಯಾವುದೋ ಮನೆಯಲ್ಲಿ ಕೂಡಿಹಾಕುತ್ತಾರೆ ಎಂದು ಹೇಳುವ ದೇವೇಗೌಡರು, ಮಗು ದೂರವಾದ ಕಾರಣ ಅನ್ನ ನೀರು ಬಿಟ್ಟಿದ್ದ ತಾಯಿ ತನ್ನ ಗಂಡನಿಗೆ ಜಮೀನಿನ ಸಹವಾಸವೇ ಬೇಡ, ಮಗುವನ್ನು ವಾಪಸ್ಸು ಕರೆದುಕೊಂಡು ಬರಲು ಹೇಳಿದಾಗ ಅ ವ್ಯಕ್ತಿ ಅಲ್ಲಿಗೆ ಹೋದಾಗಲೂ ಆತನಿಗೆ ಮತ್ತು ಮಗುವಿಗೆ ಮಾನಸಿಕ ಹಿಂಸೆ ನೀಡುತ್ತಾರೆ ಎನ್ನುತ್ತಾರೆ.

ಚಿಕ್ಕಮಗಳೂರು: ನಗರದಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡುವಾಗ ಸುದ್ದಿಗೋಷ್ಟಿಯೊಂದನ್ನು ನಡೆಸಿ ಮಾತಾಡಿದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ (HD Devegowda) ಅವರು ಡಿಕೆ ಶಿವಕುಮಾರ್ (DK Shivakumar) ಮೇಲೆ ತೀವ್ರ ವಾಗ್ದಾಳಿ ನಡೆಸಿ ಗುರುತರವಾದ ಆರೋಪವೊಂದನ್ನು ಮಾಡಿದರು. ನಿನ್ನೆ ಬೆಂಗಳೂರಲ್ಲಿ ಜಮೀನೊಂದಕ್ಕೆ ಸಂಬಂಧಿಸಿದಂತೆ ಶಿವಕುಮಾರ್ ಬಾಲಕಿಯನ್ನು ಅಪಹರಿಸಿದ್ದನ್ನು ಕುಮಾರಸ್ವಾಮಿ (HD Kumaraswamy) ಹೇಳಿದ್ದರು. ಆ ಕತೆಯನ್ನು ದೇವೇಗೌಡರು ಇಂದು ಸಂಪೂರ್ಣವಾಗಿ ವಿವರಿಸಿದರು. ಅಮೇರಿಕದಲ್ಲಿ ಹಣ ಸಂಪಾದನೆ ಮಾಡಿಕೊಂಡು ಸ್ವದೇಶಕ್ಕೆ ವಾಪಸ್ಸಾದ ವ್ಯಕ್ತಿಯೊಬ್ಬ ಬಿಡದಿ ಬಳಿ ಒಂದು ಐಟಿ ಕಂಪನಿ ಸ್ಥಾಪಿಸಲು ಜಮೀನು ಖರೀದಿಸುತ್ತಾರೆ. ಆದರೆ ಶಿವಕುಮಾರ್ ಸುಳ್ಳು ದಾಖಲಾತಿ ಪತ್ರಗಳನ್ನು ತಯಾರಿಸಿ ಆ ಜಮೀನನ್ನು ಕಬಳಿಸಲು ಪ್ರಯತ್ನಿಸುತ್ತಾರೆ.

ಆ ವ್ಯಕ್ತಿ ಕೋರ್ಟ್ ಮೊರೆಹೊಕ್ಕಾಗ ಉಚ್ಚ ಮತ್ತು ಸರ್ವೋಚ್ಛ ನ್ಯಾಯಾಲಯ ಎರಡರಲ್ಲೂ ಶಿವಕುಮಾರ್ ಗೆ ಸೋಲಾಗುತ್ತದೆ ಎಂದು ದೇವೇಗೌಡ ಹೇಳುತ್ತಾರೆ. ನಂತರ ಅ ನಿರ್ದಿಷ್ಟ ಜಮೀನನ್ನು ಪಡೆಯಲೇ ಬೇಕೆಂದು ಹಟಕ್ಕೆ ಬೀಳುವ ಶಿವಕಮಾರ್ ಅ ವ್ಯಕ್ತಿಯ 9-ವರ್ಷದ ಮಗಳನ್ನು ಅಪಹರಿಸಿ ಯಾವುದೋ ಮನೆಯಲ್ಲಿ ಕೂಡಿಹಾಕುತ್ತಾರೆ ಎಂದು ಹೇಳುವ ದೇವೇಗೌಡರು, ಮಗು ದೂರವಾದ ಕಾರಣ ಅನ್ನ ನೀರು ಬಿಟ್ಟಿದ್ದ ತಾಯಿ ತನ್ನ ಗಂಡನಿಗೆ ಜಮೀನಿನ ಸಹವಾಸವೇ ಬೇಡ, ಮಗುವನ್ನು ವಾಪಸ್ಸು ಕರೆದುಕೊಂಡು ಬರಲು ಹೇಳಿದಾಗ ಅ ವ್ಯಕ್ತಿ ಅಲ್ಲಿಗೆ ಹೋದಾಗಲೂ ಆತನಿಗೆ ಮತ್ತು ಮಗುವಿಗೆ ಮಾನಸಿಕ ಹಿಂಸೆ ನೀಡುತ್ತಾರೆ ಎನ್ನುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ವಿಶ್ವದ ಅಗ್ರಗಣ್ಯ ನಾಯಕನಾಗಿ ಬೆಳೆದಿರುವ ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಬೇಕಿದೆ: ಹೆಚ್ ಡಿ ದೇವೇಗೌಡ 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More