AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​​ನಲ್ಲಿ ಮುಂದುವರಿದ ಮುನಿಸು?: ಸಿಎಂ ಸಭೆಗೆ ರಾಮಲಿಂಗಾರೆಡ್ಡಿ, ಜಮೀರ್​​ ಗೈರು

ಕಾಂಗ್ರೆಸ್​​ನಲ್ಲಿ ಮುಂದುವರಿದ ಮುನಿಸು?: ಸಿಎಂ ಸಭೆಗೆ ರಾಮಲಿಂಗಾರೆಡ್ಡಿ, ಜಮೀರ್​​ ಗೈರು

ಪ್ರಸನ್ನ ಗಾಂವ್ಕರ್​
| Edited By: |

Updated on:Jul 14, 2026 | 7:00 PM

Share

Karnataka Politics: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬೆಂಗಳೂರು ಕಾಂಗ್ರೆಸ್ ಶಾಸಕರೊಂದಿಗೆ ಸಭೆ ನಡೆಸಿದ್ದು, ಮೀಟಿಂಗ್​​ಗೆ ಪ್ರಮುಖ ನಾಯಕರಾದ ರಾಮಲಿಂಗಾ ರೆಡ್ಡಿ ಮತ್ತು ಜಮೀರ್ ಅಹಮದ್ ಖಾನ್ ಗೈರು ಹಾಜರಾಗಿದ್ದಾರೆ. ಗೈರಿನ ಬಗ್ಗೆ ನಾನಾ ವ್ಯಾಖ್ಯಾನಗಳು ಕೇಳಿಬರುತ್ತಿದ್ದು, ನಾಯಕರ ಮುನಿಸು ಮುಂದುವರಿದಿದ್ಯಾ ಎಂಬ ಬಗ್ಗೆಯೂ ಪ್ರಶ್ನೆಗಳು ಉದ್ಭವಿಸಿವೆ.

ಬೆಂಗಳೂರು, ಜುಲೈ 14: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಂಗಳೂರು ಕಾಂಗ್ರೆಸ್ ಶಾಸಕರೊಂದಿಗೆ ವಿಶೇಷ ಸಭೆ ನಡೆಸಿದ್ದು, ಈ ಸಭೆಯಲ್ಲಿ ಬಹುತೇಕ ಶಾಸಕರು ಭಾಗವಹಿಸಿದ್ದರೂ ಇಬ್ಬರು ಪ್ರಮುಖ ನಾಯಕರು ಗೈರಾಗಿದ್ದಾರೆ. ಸಚಿವ ರಾಮಲಿಂಗಾ ರೆಡ್ಡಿ ಮತ್ತು ಜಮೀರ್ ಅಹಮದ್ ಖಾನ್ ಮೀಟಿಂಗ್​​ನಿಂದ ದೂರವೇ ಉಳಿದಿದ್ದು, ಅವರ ಈ ನಿರ್ಧಾರದ ಬಗ್ಗೆ ನಾನಾ ವ್ಯಾಖ್ಯಾನಗಳು ಕೇಳಿಬಂದಿವೆ. ಭೈರತಿ ಸುರೇಶ್​​ ಕೂಡ ಸಭೆಗೆ ಗೈರು ಹಾಜರಾಗಿದ್ದಾರೆಯಾದರೂ ಅವರು ಪೂರ್ವನಿಯೋಜಿತ ಕಾರ್ಯಕ್ರಮದ ನಿಮಿತ್ತ ರಾಜ್ಯದಲ್ಲಿಲ್ಲ ಎನ್ನಲಾಗಿದೆ. ರಾಮಲಿಂಗಾ ರೆಡ್ಡಿ ಅವರಿಗೆ ಬೆಂಗಳೂರು ಅಭಿವೃದ್ಧಿ ಖಾತೆ ಸಿಗದ ಕುರಿತು ಮೊದಲಿನಿಂದಲೂ ಅಸಮಾಧಾನವಿತ್ತು. ನಂತರ ಅವರನ್ನು ಮನವೊಲಿಸಲಾಗಿದ್ದರೂ, ಇಂದಿನ ಸಭೆಗೆ ಅವರು ಹಾಜರಾಗದಿರುವುದು ಆ ಮುನಿಸು ಇನ್ನೂ ತಣ್ಣಗಾಗಿಲ್ಲವಾ ಎಂಬ ಪ್ರಶ್ನೆ ಉದ್ಭವಿಸುವಂತೆ ಮಾಡಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jul 14, 2026 06:58 PM

Follow Us