ಕಾಂಗ್ರೆಸ್ನಲ್ಲಿ ಮುಂದುವರಿದ ಮುನಿಸು?: ಸಿಎಂ ಸಭೆಗೆ ರಾಮಲಿಂಗಾರೆಡ್ಡಿ, ಜಮೀರ್ ಗೈರು
Karnataka Politics: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬೆಂಗಳೂರು ಕಾಂಗ್ರೆಸ್ ಶಾಸಕರೊಂದಿಗೆ ಸಭೆ ನಡೆಸಿದ್ದು, ಮೀಟಿಂಗ್ಗೆ ಪ್ರಮುಖ ನಾಯಕರಾದ ರಾಮಲಿಂಗಾ ರೆಡ್ಡಿ ಮತ್ತು ಜಮೀರ್ ಅಹಮದ್ ಖಾನ್ ಗೈರು ಹಾಜರಾಗಿದ್ದಾರೆ. ಗೈರಿನ ಬಗ್ಗೆ ನಾನಾ ವ್ಯಾಖ್ಯಾನಗಳು ಕೇಳಿಬರುತ್ತಿದ್ದು, ನಾಯಕರ ಮುನಿಸು ಮುಂದುವರಿದಿದ್ಯಾ ಎಂಬ ಬಗ್ಗೆಯೂ ಪ್ರಶ್ನೆಗಳು ಉದ್ಭವಿಸಿವೆ.
ಬೆಂಗಳೂರು, ಜುಲೈ 14: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಂಗಳೂರು ಕಾಂಗ್ರೆಸ್ ಶಾಸಕರೊಂದಿಗೆ ವಿಶೇಷ ಸಭೆ ನಡೆಸಿದ್ದು, ಈ ಸಭೆಯಲ್ಲಿ ಬಹುತೇಕ ಶಾಸಕರು ಭಾಗವಹಿಸಿದ್ದರೂ ಇಬ್ಬರು ಪ್ರಮುಖ ನಾಯಕರು ಗೈರಾಗಿದ್ದಾರೆ. ಸಚಿವ ರಾಮಲಿಂಗಾ ರೆಡ್ಡಿ ಮತ್ತು ಜಮೀರ್ ಅಹಮದ್ ಖಾನ್ ಮೀಟಿಂಗ್ನಿಂದ ದೂರವೇ ಉಳಿದಿದ್ದು, ಅವರ ಈ ನಿರ್ಧಾರದ ಬಗ್ಗೆ ನಾನಾ ವ್ಯಾಖ್ಯಾನಗಳು ಕೇಳಿಬಂದಿವೆ. ಭೈರತಿ ಸುರೇಶ್ ಕೂಡ ಸಭೆಗೆ ಗೈರು ಹಾಜರಾಗಿದ್ದಾರೆಯಾದರೂ ಅವರು ಪೂರ್ವನಿಯೋಜಿತ ಕಾರ್ಯಕ್ರಮದ ನಿಮಿತ್ತ ರಾಜ್ಯದಲ್ಲಿಲ್ಲ ಎನ್ನಲಾಗಿದೆ. ರಾಮಲಿಂಗಾ ರೆಡ್ಡಿ ಅವರಿಗೆ ಬೆಂಗಳೂರು ಅಭಿವೃದ್ಧಿ ಖಾತೆ ಸಿಗದ ಕುರಿತು ಮೊದಲಿನಿಂದಲೂ ಅಸಮಾಧಾನವಿತ್ತು. ನಂತರ ಅವರನ್ನು ಮನವೊಲಿಸಲಾಗಿದ್ದರೂ, ಇಂದಿನ ಸಭೆಗೆ ಅವರು ಹಾಜರಾಗದಿರುವುದು ಆ ಮುನಿಸು ಇನ್ನೂ ತಣ್ಣಗಾಗಿಲ್ಲವಾ ಎಂಬ ಪ್ರಶ್ನೆ ಉದ್ಭವಿಸುವಂತೆ ಮಾಡಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

