AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Polls: ರಾಜಕಾರಣಿಗಳಿಗೆ ಸಾವಿನ ಮನೆಯಲ್ಲೂ ರಾಜಕೀಯದ ಮಾತು ಬೇಕೇ?

Karnataka Assembly Polls: ರಾಜಕಾರಣಿಗಳಿಗೆ ಸಾವಿನ ಮನೆಯಲ್ಲೂ ರಾಜಕೀಯದ ಮಾತು ಬೇಕೇ?

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Apr 15, 2023 | 12:31 PM

Share

ಸತ್ತವರ ಮನೆಯಲ್ಲಿ ಕುಟುಂಬಸ್ಥರು, ಆಪ್ತರು, ಸ್ನೇಹಿತರು ಶೋಕದಲ್ಲಿ ಮುಳುಗಿರುತ್ತಾರೆ. ರಾಜಕಾರಣಿಗಳು ಅಲ್ಲಿ ಸ್ವಲ್ಪ ಸಮಯದವರೆಗೆ ಮೌನವಾಗಿ ಕೂತಿದ್ದರೆ ಅದೇ ಅಗಲಿದ ಆತ್ಮಕ್ಕೆ ಸಲ್ಲಿಸುವ ಗೌರವ.

ದೇವನಹಳ್ಳಿ: ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾದ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ವೆಂಕಟಸ್ವಾಮಿ (Venkataswamy) ಪಾರ್ಥೀವ ಶರೀರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಶ್ರದ್ಧಾಂಜಲಿ ಸಲ್ಲಿಸಿದರು. ದೇವನಹಳ್ಳಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆಹೆಚ್ ಮುನಿಯಪ್ಪ (KH Muniyappa) ಸಹ ಶಿವಕುಮಾರ್ ಜೊತೆ ತೆರಳಿ ತಮ್ಮ ಅಂತಿಮ ನಮನ ಸಲ್ಲಿಸಿದರು. ಅದೆಲ್ಲ ಸರಿ, ಆದರೆ ಈ ನಾಯಕರು ಸಾವಿನ ಮನೆಯಲ್ಲಿ ಕೂತು ರಾಜಕೀಯದ ವಿಷಯಗಳನ್ನು ಚರ್ಚಿಸುವುದು ಬೇಸರ ಹುಟ್ಟಿಸುತ್ತದೆ. ರಾಜಕೀಯವನ್ನು ಸೂತಕದ ಮನೆ ಬಿಟ್ಟು ಎಲ್ಲಿ ಬೇಕಾದರೂ ಚರ್ಚಿಸಬಹುದು. ಸತ್ತವರ ಮನೆಯಲ್ಲಿ ಕುಟುಂಬಸ್ಥರು, ಆಪ್ತರು, ಸ್ನೇಹಿತರು ಶೋಕದಲ್ಲಿ ಮುಳುಗಿರುತ್ತಾರೆ. ರಾಜಕಾರಣಿಗಳು ಅಲ್ಲಿ ಸ್ವಲ್ಪ ಸಮಯದವರೆಗೆ ಮೌನವಾಗಿ ಕೂತಿದ್ದರೆ ಅದೇ ಅಗಲಿದ ಆತ್ಮಕ್ಕೆ ಸಲ್ಲಿಸುವ ಗೌರವ ಮಾರಾಯ್ರೇ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Apr 15, 2023 12:31 PM

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.