DK Shivakumar: ವಿರೋಧ ಪಕ್ಷದ ಶಾಸಕರನ್ನು ಸಭೆಗೆ ಕರೆದ ಡಿಕೆ ಶಿವಕುಮಾರ್ ಖುದ್ದು ನಾಪತ್ತೆ, ಬೇಸರಿಸಿಕೊಂಡು ಹೊರಬಿದ್ದ ಬಿಜೆಪಿ ಶಾಸಕರು!
ಶಾಸಕರು ಹೊರಡುವ ಮೊದಲು ಮಾಧ್ಯಮ ಪ್ರತಿನಿಧಿಗಳ ಮುಂದೆ ತಮ್ಮ ಅಸಹನೆಯನ್ನು ಬಹಿರಂಗಪಡಿಸಿದರು.
ಬೆಂಗಳೂರು: ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದಂತೆ ವಿಷಯಗಳನ್ನು ಚರ್ಚಿಸಲು ಉಪ ಮುಖ್ಯಮಂತ್ರಿ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ (DK Shivakumar) ವಿರೋಧ ಪಕ್ಷದ ಶಾಸಕರೂ ಸೇರಿದಂತೆ ನಗರದ ಎಲ್ಲ ಶಾಸಕರನ್ನು ಇಂದು ಸಭೆಗೆ ಆಹ್ವಾನಿಸಿದ್ದರು. ಸಭೆ ವಿಧಾನ ಸೌಧದ ಕಾನ್ಫರೆನ್ಸ್ ಹಾಲ್ ನಲ್ಲಿ ಬೆಳಗ್ಗೆ 11 ಗಂಟೆಗೆ ಆರಂಭವಾಗಬೇಕಿತ್ತು. ಆದರೆ ಸಮಯ 12 ಮೀರಿದರೂ ಶಿವಕುಮಾರ್ ಸಭೆಗೆ ಬರಲಿಲ್ಲ. ಕಾಯ್ದು ಕಾಯ್ದು ಬೇಸತ್ತ ಬಿಜೆಪಿ ಶಾಸಕರಾದ ಬೈರತಿ ಬಸವರಾಜ (Byrathi Basavaraj), ಎಸ್ ಟಿ ಸೋಮಶೇಖರ್ (ST Somashekar), ಮತ್ತು ಡಾ ಸಿಎನ್ ಅಶ್ವಥ್ ನಾರಾಯಣ (Dr CN Ashwath Narayan) ಬೇಸರ ಮಾಡಿಕೊಂಡು ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಾ ಅಲ್ಲಿಂದ ಹೊರಟರು. ಹೊರಡುವ ಮೊದಲು ಮಾಧ್ಯಮ ಪ್ರತಿನಿಧಿಗಳ ಮುಂದೆ ತಮ್ಮ ಅಸಹನೆಯನ್ನು ಬಹಿರಂಗಪಡಿಸಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

