AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಮೀನು ಮೇಲೆ ಜೈಲಿಂದ ಹೊರಬಂದು ವೀರೋಚಿತ ಮೆರವಣಿಗೆ ಮಾಡಿಸಿಕೊಂಡ ದೇಶದ ಏಕೈಕ ರಾಜಕಾರಣಿ ಡಿಕೆ ಶಿವಕುಮಾರ್: ಕೆಎಸ್ ಈಶ್ವರಪ್ಪ

ಜಾಮೀನು ಮೇಲೆ ಜೈಲಿಂದ ಹೊರಬಂದು ವೀರೋಚಿತ ಮೆರವಣಿಗೆ ಮಾಡಿಸಿಕೊಂಡ ದೇಶದ ಏಕೈಕ ರಾಜಕಾರಣಿ ಡಿಕೆ ಶಿವಕುಮಾರ್: ಕೆಎಸ್ ಈಶ್ವರಪ್ಪ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Oct 19, 2023 | 3:00 PM

Share

ವ್ಯಕ್ತಿಯೊಬ್ಬನ ವಿಚಾರಣೆ ಅಥವಾ ತನಿಖೆ ನಡೆಯುವಾಗ ಅವನು ಮಾಧ್ಯಮದವರು ಕೇಳುವ ಪ್ರಶ್ನೆಗಳಿಗೆ ಸೌಮ್ಯವಾಗಿ ಸೌಜನ್ಯತೆಯಿಂದ ಉತ್ತರಿಸುತ್ತಾನೆಯೇ ಹೊರತು ಶಿವಕುಮಾರ್ ನಂತೆ ಗೂಂಡಾಗಳ ಹಾಗಲ್ಲ ಎಂದು ಈಶ್ವರಪ್ಪ ಹೇಳಿದರು. ತನ್ನ ವಿರುದ್ಧ ಆಪಾದನೆ ಮಾಡಿದವರ ಹಗರಣಗಳನ್ನು ಬಿಚ್ಚಿಡುತ್ತೇನೆ ಅಂತ ಆರ್ಭಟಿಸಿದ್ದ ಅವರು ಯಾಕೆ ಸುಮ್ಮನಿದ್ದಾರೆ ಎಂದು ಬಿಜೆಪಿ ನಾಯಕ ಪ್ರಶ್ನಿಸಿದರು.

ಶಿವಮೊಗ್ಗ: ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತಾಡಿದ ಹಿರಿಯ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ (KS Eshwarappa), ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಹೈಕೋರ್ಟ್ ನಿಂದ ಇಂದು ಹಿನ್ನಡೆ ಎದುರಿಸಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರನ್ನು ಲೇವಡಿ ಮಾಡಿದರು. ಇದೇ ಪ್ರಕರಣದಲ್ಲಿ ತಿಹಾರ್ ಜೈಲಲ್ಲಿದ್ದ (Tihar jail) ಶಿವಕುಮಾರ್ ಜಾಮೀನು ಪಡೆದು ಬೆಂಗಳೂರಿಗೆ ವಾಪಸ್ಸು ಬಂದಾಗ ಪ್ರಕರಣದಿಂದ ಖುಲಾಸೆಯಾಗಿ ಬಂದಿದ್ದಾರೇನೋ ಎಂಬಂತೆ ಮೆರವಣಿಗೆ ಮಾಡಲಾಗಿತ್ತು. ರಾಜಕಾರಣಿಗಳು ಜೈಲಿಗೆ ಹೋಗೋದು ಹೊಸದೇನಲ್ಲ, ಅರೋಪ ಮುಕ್ತರಾದ ಬಳಿಕ ಅಲ್ಲಿಂದ ಹೊರಬರುತ್ತಾರೆ. ಆದರೆ, ಜಾಮೀನು ಪಡೆದು ಹೊರಬಂದರೂ ವೀರೋಚಿತ ಮೆರವಣಿಗೆಯಲ್ಲಿ ಮನೆಗೆ ವಾಪಸ್ಸಾದ ದೇಶದ ಏಕೈಕ ರಾಜಕಾರಣಿ ಶಿವಕುಮಾರ್ ಎಂದು ಈಶ್ವರಪ್ಪ ಹೇಳಿದರು. ವ್ಯಕ್ತಿಯೊಬ್ಬನ ವಿಚಾರಣೆ ಅಥವಾ ತನಿಖೆ ನಡೆಯುವಾಗ ಅವನು ಮಾಧ್ಯಮದವರು ಕೇಳುವ ಪ್ರಶ್ನೆಗಳಿಗೆ ಸೌಮ್ಯವಾಗಿ ಸೌಜನ್ಯತೆಯಿಂದ ಉತ್ತರಿಸುತ್ತಾನೆಯೇ ಹೊರತು ಶಿವಕುಮಾರ್ ನಂತೆ ಗೂಂಡಾಗಳ ಹಾಗಲ್ಲ ಎಂದು ಈಶ್ವರಪ್ಪ ಹೇಳಿದರು. ತನ್ನ ವಿರುದ್ಧ ಆಪಾದನೆ ಮಾಡಿದವರ ಹಗರಣಗಳನ್ನು ಬಿಚ್ಚಿಡುತ್ತೇನೆ ಅಂತ ಆರ್ಭಟಿಸಿದ್ದ ಅವರು ಯಾಕೆ ಸುಮ್ಮನಿದ್ದಾರೆ ಎಂದು ಬಿಜೆಪಿ ನಾಯಕ ಪ್ರಶ್ನಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.