ಅಂಜಲಿ ನಿಂಬಾಳ್ಕರ್ ಗೆ ಬಿ-ಫಾರಂ ವಿತರಿಸಿ ಆಶೀರ್ವದಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ

Updated on: Apr 06, 2024 | 6:45 PM

ಶಿವಕುಮಾರ್ ಅವರಿಂದ ಬಿ ಫಾರಂ ಪಡೆದ ಬಳಿಕ ಅಂಜಲಿ ಕೆಪಿಸಿಸಿ ಅಧ್ಯಕ್ಷನ ಕಾಲಿಗೆ ನಮಸ್ಕರಿಸುವುದನ್ನು ನೋಡಬಹುದು. ಶಿವಕುಮಾರ್ ಅಂಜಲಿಯವರ ತಲೆ ಮೇಲೆ ಕೈಯಿಟ್ಟು ಆಶೀರ್ವದಿಸುತ್ತಾರೆ. ನಂತರ ಅಂಜಲಿ ಶಿವಕುಮಾರ್ ಎಡಭಾಗದಲ್ಲಿದ್ದ ದೇವರ ಫೋಟೋಗಳಿಗೂ ಶಿರಬಾಗುತ್ತಾರೆ.

ಬೆಂಗಳೂರು: ಇಂದು ಕೋಲಾರದ ಮುಳುಬಾಗಿಲುನ ಕುರುಡುಮಲೆ ವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಲೋಕಸಭಾ ಚುನಾವಣೆ ಪ್ರಚಾರ ಅಭಿಯಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರ ಹಲವಾರು ನಾಯಕರೊಂದಿಗೆ ಅಧಿಕೃತವಾಗಿ ಶುರುಮಾಡಿದ ಡಿಕೆ ಶಿವಕುಮಾರ್ (DK Shivakumar) ಮಧ್ಯಾಹ್ನದ ನಂತರ ಬೆಂಗಳೂರಿಗೆ ವಾಪಸ್ಸಾಗಿ ಕೆಪಿಸಿಸಿ ಕಚೇರಿಯಲ್ಲಿ ಕಾಯುತ್ತಿದ್ದ ಅಂಜಲಿ ನಿಂಬಾಳ್ಕರ್ (Anjali Nimbalkar) ಅವರಿಗೆ ಬಿ ಫಾರಂ ವಿತರಿಸಿದರು. ಅಂಜಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ (Uttara Kannada LS constituency) ಸ್ಪರ್ಧಿಸುತ್ತಿದ್ದು ಅವರ ಎದುರಾಳಿ ಬಿಜೆಪಿಯ ಮಾಜಿ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆಗಿದ್ದಾರೆ. ಇವರಿಬ್ಬರೂ ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸೋತಿದ್ದರೆನ್ನುವುದು ವಿಷೇಶ. ಶಿವಕುಮಾರ್ ಅವರಿಂದ ಬಿ ಫಾರಂ ಪಡೆದ ಬಳಿಕ ಅಂಜಲಿ ಕೆಪಿಸಿಸಿ ಅಧ್ಯಕ್ಷನ ಕಾಲಿಗೆ ನಮಸ್ಕರಿಸುವುದನ್ನು ನೋಡಬಹುದು. ಶಿವಕುಮಾರ್ ಅಂಜಲಿಯವರ ತಲೆ ಮೇಲೆ ಕೈಯಿಟ್ಟು ಆಶೀರ್ವದಿಸುತ್ತಾರೆ. ನಂತರ ಅಂಜಲಿ ಶಿವಕುಮಾರ್ ಎಡಭಾಗದಲ್ಲಿದ್ದ ದೇವರ ಫೋಟೋಗಳಿಗೂ ಶಿರಬಾಗುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಪತ್ನಿ ಪರ ಹೇಮಂತ್ ನಿಂಬಾಳ್ಕರ್ ಕೆಲಸ ಆರೋಪ: ಚುನಾವಣಾ ಆಯೋಗಕ್ಕೆ ಬಿಜೆಪಿಯಿಂದ 4 ದೂರು

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.